ಬಂಟ್ವಾಳ

ನಿರ್ಣಾಯಕ ಸ್ಥಾನದಲ್ಲಿ ಕುಲಾಲ ಸಮುದಾಯ ಮತದಾರರು: ಮುಖಂಡ ಸದಾಶಿವ ಬಂಗೇರ

ದಕ್ಷಿಣ ಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 1.84 ಲಕ್ಷದಷ್ಟು ಕುಲಾಲ ಸಮುದಾಯದ ಮತದಾರರು ಇದ್ದು, ಉದ್ದೇಶಪೂರ್ವಕವಾಗಿಯೇ ನಮ್ಮ ಸಮುದಾಯದವರು ಕೇವಲ 40 ಸಾವಿರದಷ್ಟಿದ್ದಾರೆ ಎಂದು ಹೇಳಲಾಗುತ್ತಿದೆ ಎಂದು ಬಂಟ್ವಾಳ ತಾಲೂಕು ಕುಲಾಲ ಸಂಘದ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಲಾಲ ಯಾನೆ ಮೂಲ್ಯ ಸಮುದಾಯದ ಸಂಖ್ಯೆ ಗರಿಷ್ಠ ಪ್ರಮಾಣದಲ್ಲಿದ್ದು, ಮೂರನೇ ಅತಿ ಹೆಚ್ಚು ಮತದಾರರಿರುವ ಸಮುದಾಯವಾಗಿದೆ, ಕುಲಾಲ ಮತದಾರರು ನಿರ್ಣಾಯಕ ಸ್ಥಾನದಲ್ಲಿದ್ದಾರೆ. ಅಂದಾಜು ಲೆಕ್ಕಾಚಾರದ ಪ್ರಕಾರ, ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 39 ಸಾವಿರ, ಮೂಡುಬಿದಿರೆಯಲ್ಲಿ 26 ಸಾವಿರ, ಬೆಳ್ತಂಗಡಿಯಲ್ಲಿ 22 ಸಾವಿರ, ಪುತ್ತೂರಲ್ಲಿ 19 ಸಾವಿರ, ಸುಳ್ಯದಲ್ಲಿ 16 ಸಾವಿರ, ಮಂಗಳೂರು ಕ್ಷೇತ್ರದಲ್ಲಿ 26 ಸಾವಿರ, ಮಂಗಳೂರು ಉತ್ತರದಲ್ಲಿ 19 ಸಾವಿರ, ದಕ್ಷಿಣದಲ್ಲಿ 17 ಸಾವಿರದಷ್ಟು ಕುಲಾಲ ಸಮುದಾಯದವರು ಮತ ಚಲಾಯಿಸಲಿದ್ದಾರೆ ಎಂದು ಪ್ರತಿಪಾದಿಸಿದ ಅವರು, ಸಾಮಾಜಿಕ ಮಾಧ್ಯಮಗಳು ಹಾಗೂ ಇತರೆ ಮಾಧ್ಯಮಗಳಲ್ಲಿ ನಾನಾ ಸಮುದಾಯಗಳ ಲೆಕ್ಕಾಚಾರಗಳನ್ನು ಬಣ್ಣಿಸುವಾಗ ಎರಡು ಸಮುದಾಯಗಳ ಅಂಕಿ ಅಂಶ ತೋರಿಸಿ, ಉಳಿದಂತೆ ಇತರ ಎಲ್ಲ ಹಿಂದುಳಿದ ವರ್ಗಗಳ ಒಟ್ಟು ಸಂಖ್ಯೆ 40 ಸಾವಿರ ಎಂದು ತೋರಿಸಲಾಗುತ್ತಿದೆ. ಇದು ಖಂಡನೀಯ. ಪ್ರತಿ ಕ್ಷೇತ್ರದಲ್ಲೂ ನಿರ್ಣಾಯಕ ಸಂಖ್ಯೆಯಲ್ಲಿರುವ ಕುಲಾಲ ಮತದಾರರು ಜನಪ್ರತಿನಿಧಿ ಆಯ್ಕೆ ಸಂದರ್ಭ ನಿರ್ಣಾಯಕರಾಗಿರುತ್ತಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ನಾರಾಯಣ ಸಿ.ಪೆರ್ನೆ, ಸುಕುಮಾರ ಬಂಟ್ವಾಳ, ರಮೇಶ್ ಪಣೋಲಿಬೈಲು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts