ಬಂಟ್ವಾಳ ಕ್ಷೇತ್ರದಲ್ಲೂ ಕಾಂಗ್ರೆಸ್ ಲೀಡ್, ಪದ್ಮರಾಜ್ ಕಡೆ ಮತದಾರರ ಒಲವು: ಬಂಟ್ವಾಳದಲ್ಲಿ ರಮಾನಾಥ ರೈ

ಜಾಹೀರಾತು

ಗ್ಯಾರಂಟಿ ಬೋಗಸ್, ಅದನ್ನು ನಂಬಬೇಡಿ ಎಂದು ಇಲ್ಲಿನ ಶಾಸಕರು ಹೇಳಿದ್ದರು, ಆದರೆ ಈಗ ಇದೇ ಕ್ಷೇತ್ರದ ಮಹಿಳೆಯರು ಗ್ಯಾರಂಟಿಯ ಫಲಾನುಭವಿಗಳಾಗಿದ್ದು, ಕಾರ್ಯಕರ್ತರು ಮತಯಾಚನೆಗೆ ಹೋದಾಗ ಉತ್ತಮ ಪ್ರತಿಕ್ರಿಯೆ ಲಭಿಸುತ್ತಿದೆ. ಈ ಬಾರಿ ಪದ್ಮರಾಜ್ ಅವರು ಕಾಂಗ್ರೆಸ್ ನಿಂದ ಗೆಲ್ಲುವುದು ನಿಶ್ಚಿತವಾಗಿದ್ದು, ಬಂಟ್ವಾಳ ಕ್ಷೇತ್ರದಲ್ಲಿ ಕಳೆದ ಬಾರಿ ಅಲ್ಪ ಅಂತರದಲ್ಲಿ ಆಗಿರುವ ಹಿನ್ನಡೆ ತೊಡೆದು, ಈ ಬಾರಿ ಕಾಂಗ್ರೆಸ್ ಲೀಡ್ ಗಳಿಸುತ್ತದೆ ಎಂಬ ವಿಶ್ವಾಸವನ್ನು ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಾಹೀರಾತು

ಕಾಂಗ್ರೆಸ್ ನ ಸಂಸದರುಗಳಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಾಗಿದ್ದು ಹೊರತುಪಡಿಸಿದರೆ, ಬಿಜೆಪಿಯವರು ಕೇವಲ ಭಾವನಾತ್ಮಕ ವಿಚಾರಗಳಿಂದ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಈಗ ನಡೆಯುತ್ತಿರುವುದೆಲ್ಲವೂ ಕಾಂಗ್ರೆಸ್ ಅವಧಿಯಲ್ಲೇ ಮಂಜೂರುಗೊಂಡವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದರೆ ಕೇಂದ್ರದ ಗ್ಯಾರಂಟಿ ಜಾರಿಯಾಗಲಿದೆ ಎಂದು ರೈ ಹೇಳಿದರು.

ಬಂಟ್ವಾಳ ‌ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಕ್ಷ ಪ್ರಮುಖರಾದ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್, ಶಬೀರ್ ಸಿದ್ಧಕಟ್ಟೆ, ವೆಂಕಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

 

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಕ್ಷೇತ್ರದಲ್ಲೂ ಕಾಂಗ್ರೆಸ್ ಲೀಡ್, ಪದ್ಮರಾಜ್ ಕಡೆ ಮತದಾರರ ಒಲವು: ಬಂಟ್ವಾಳದಲ್ಲಿ ರಮಾನಾಥ ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*