ಬಂಟ್ವಾಳ

ಪ್ರಾಕೃತಿಕ ವಿಕೋಪ ನಿರ್ವಹಣೆ, ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ: ಬಂಟ್ವಾಳ ತಹಸೀಲ್ದಾರ್ ನೇತೃತ್ವದ ಸಭೆಯಲ್ಲಿ ಸೂಚನೆ

ಗಣಿಗಾರಿಕೆಯ ಹೊಂಡಕ್ಕೆ ತಡೆಬೇಲಿ ಹಾಕುವುದು ಸಹಿತ ಹಲವು ವಿಚಾರಗಳು ಶನಿವಾರ ಬಂಟ್ವಾಳ ತಾಪಂ ಸಭಾಂಗಣದಲ್ಲಿ ನಡೆದ ಪ್ರಾಕೃತಿಕ ವಿಕೋಪ ನಿರ್ವಹಣೆ ಮತ್ತು ಕುಡಿಯುವ ನೀರಿನ ಸಮಸ್ಯೆ ಕುರಿತ ತಹಸೀಲ್ದಾರ್ ಅರ್ಚನಾ ಡಿ. ಭಟ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆಗೆ ಬಂದವು.

ಜಾಹೀರಾತು

ಕುಡಿಯುವ ನೀರಿನ ಸಮಸ್ಯೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ನೀಡಿರುವ ನಿರ್ದೇಶನದಂತೆ ಬಂಟ್ವಾಳ ತಾಪಂ ಎಸ್ ಜಿ ಎಸ್ ವೈ ಸಭಾಂಗಣದಲ್ಲಿ ಸಭೆ ನಡೆಯಿತು.

ನಗರ ಮತ್ತು ಗ್ರಾಮ ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಕ್ರಿಯಾ ಯೋಜನೆ ಸಿದ್ದಪಡಿಸುವುದು. ಅಪಾಯಕಾರಿ ಪ್ರದೇಶಗಳು ಅಂದರೆ ಪ್ರವಾಹ ಭೂ ಕುಸಿತ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸುವುದು ಮತ್ತು ವಿಪರೀತ ಮಳೆಯ ಸಮಯ ಸದ್ರಿ ಪ್ರದೇಶಗಳಲ್ಲಿ ತೀವ್ರ ನಿಗಾ ವಹಿಸುವುದು  ಗಣಿಗಾರಿಕೆಯಿಂದ ಉಂಟಾಗಿರುವ ಹೊಂಡ ಗಳಲ್ಲಿ ಮಳೆಗಾಲದಲ್ಲಿ ನೀರು ನಿಂತು ಜನ ಮತ್ತು ಜಾನುವಾರು ಗಳ ಜೀವ ಹಾನಿಯಾಗುವ ಸಂಭವ ಇರುವುದರಿಂದ ಪ್ರದೇಶಗಳಲ್ಲಿ ಸುತ್ತಲೂ ಬೇಲಿ ಅಥವಾ ತಡೆ ನಿರ್ಮಿಸುವುದು. ಮತ್ತು ಆ ಕಡೆ ತೆರಳದಂತೆ ಎಚ್ಚರಿಕೆ ಫಲಕ ಹಾಕುವುದು . ಶಾಲಾ ಕಾಲೇಜು ಅಂಗನವಾಡಿ ಕಟ್ಟಡಗಳನ್ನು ಪರಿಶೀಲಿಸಿ ಸುಸ್ಥಿತಿಯಲ್ಲಿ ಇರುವಂತೆ ಕ್ರಮವಹಿಸುವುದು ಗ್ರಾಮಪಂಚಾಯಿತಿ, ಜಿಲ್ಲಾಪಂಚಾಯತ್, ಪಿಡಬ್ಲ್ಯುಡಿ ರಸ್ತೆಗಳ ಇಕ್ಕೆಳಗಲ್ಲಿ ಇರುವ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಕಸ ಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸುವ ಕುರಿತು ಸ್ಪಷ್ಟ ಸೂಚನೆಯನ್ನು ತಹಸೀಲ್ದಾರ್ ನೀಡಿದ್ದಾರೆ.ಸಭೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಕಾಂಬ್ಳೆ, ಅಧಿಕಾರಿಗಳಾದ ಜಿ.ಕೆ.ನಾಯ್ಕ್, ತಾರಾನಾಥ ಸಾಲಿಯಾನ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts