ಬಂಟ್ವಾಳ

ಬಂಟ್ವಾಳದಲ್ಲಿ ಕಸಾಪ ಸಂಸ್ಥಾಪನಾ ದಿನಾಚರಣೆ

ಬಿ.ಸಿ.ರೋಡಿನ ಕನ್ನಡ ಭವನ ದಲ್ಲಿ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ನಡೆಯಿತು. ಈ ಸಂದರ್ಭ ಸದಸ್ಯ, ಸಂಘಟಕ, ಕವಿ ಅಬುಬಕರ್ ಅಮ್ಮುಂಜೆ ಮಾತನಾಡಿ, ಪರಿಷತ್ತಿನ ಉದ್ದೇಶವನ್ನು ಕನ್ನಡಿಗರಿಗೆ ತಿಳಿಸುವಂತಹ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದು ಅಗತ್ಯ ಎಂದರು.

ಜಾಹೀರಾತು

ವಿಟ್ಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಸಾರಥ್ಯವನ್ನು ನೀರ್ಪಾಜೆ ಭೀಮ ಭಟ್ಟರಿಂದ ವಿಶ್ವನಾಥ ಬಂಟ್ವಾಳ ತನಕ ಹಲವರು ಸಮರ್ಥವಾಗಿ ನಿರ್ವಹಿಸಿದ್ದಾರೆ ಎಂದರು‌‌

ಜಾಹೀರಾತು

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರು ಅಮ್ಮುಂಜೆಯಲ್ಲಿ ನಡೆದ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉಲ್ಲೇಖಿಸಿ ರಾಜ್ಯಕ್ಕೆ ಮಾದರಿ ಎನಿಸಿದ ಇಂತಹ ಸಮ್ಮೇಳನಗಳು ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ನಡೆಯಬೇಕು ಎಂದರು. ಕಾರ್ಯಕಾರಿ ಸಮಿತಿ ಸದಸ್ಯ ಜಯರಾಮ ಪಡ್ರೆ ಸ್ವಾಗತಿಸಿ, ವಂದಿಸಿದರು. ಪ್ರಸ್ತಾವನೆಗೈದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ  ಕಾರ್ಯದರ್ಶಿ ವಿ.ಸು. ಭಟ್ ಅವರು ಕಾರ್ಯಕ್ರಮ ನಿರೂಪಿಸಿದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ