ಬಂಟ್ವಾಳ

ಬಿ.ಸಿ.ರೋಡಿನಲ್ಲಿ ಕಾರುಗಳ ನಡುವೆ ಡಿಕ್ಕಿ, ಇಬ್ಬರಿಗೆ ಗಾಯ

ಜಾಹೀರಾತು

ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಡೆದಿದೆ. ಈ ಜಾಗದಲ್ಲಿ ಸಂಭಾವ್ಯ ಅಪಘಾತಗಳ ಕುರಿತು ಮಾಧ್ಯಮಗಳು ಹಲವು ಬಾರಿ ಎಚ್ಚರಿಸಿದ್ದವು. ಬಿ.ಸಿ.ರೋಡ್ ನಿಂದ ಬೈಪಾಸ್ ರಸ್ತೆಗೆ ಸಂಪರ್ಕ ಮಾಡುವ ಜಾಗವೀಗ ಅಪಘಾತ ತಾಣವಾಗಿ ಮಾರ್ಪಟ್ಟಿದೆ. ನರಿಕೊಂಬು ನಿವಾಸಿ ಸ್ವಾತಿ ಹಾಗೂ ಮೈರಾನ್ಪಾದೆ ನಿವಾಸಿ ಸುನಿಲ್ ಗಾಯಗೊಂಡವರು‌. ಸ್ವಾತಿಯವರು ನೇಮೋತ್ಸವಕ್ಕೆ ಪಂಜಿಕಲ್ಲುವಿಗೆ ಹೋಗಿದ್ದು, ಅಲ್ಲಿಂದ ನರಿಕೊಂಬು ‌ಮನೆಗೆ ಬರುವ ಸಂದರ್ಭ ಘಟನೆ ನಡೆದಿದೆ.

ಸುನಿಲ್ ವಿದೇಶದಲ್ಲಿ ಉದ್ಯೋಗಿಯಾಗಿದ್ದಾರೆ. ಕಳೆದ ಏ.28ರಂದು ವಿವಾಹವಾಗಿದ್ದರು.ಇಂದು‌ ಪತ್ನಿ ಹಾಗೂ ಕುಟುಂಬದವರ ಜೊತೆ ದೇವಸ್ಥಾನಕ್ಕೆ ಹೋಗಿ,ದೇವರ ದರ್ಶನ ಪಡೆದು ಮನೆಗೆ ವಾಪಸು ‌ಆಗುವ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಎರಡು ಕಾರುಗಳ ಎದುರು ಭಾಗ ಜಖಂಗೊಂಡಿವೆ. ಅಪಘಾತದಿಂದ ಕೆಲ ಹೊತ್ತು ಟ್ರಾಫಿಕ್ ಜಾಮ್ ಸಮಸ್ಯೆ ‌ಉಂಟಾಗಿತ್ತು. ಬಿ.ಸಿ.ರೋಡ್ ನ ಗಜಲಕ್ಷ್ಮೀ ಕ್ರೇನ್ ಸಹಾಯದಿಂದ ಕೂಡಲೇ ವಾಹನಗಳನ್ನು ಬದಿಗೆ ಸರಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ