ಫರಂಗಿಪೇಟೆ: ಮಾರಿಪಳ್ಳದಲ್ಲಿ ಮಂಗಳವಾರ ಸಂಜೆ ಲಾರಿಯಡಿ ಬೈಕ್ ಬಿದ್ದು ನಡೆದ ಅಪಘಾತದಲ್ಲಿ ಸೋನು (19) ಎಂಬಾತ ಸಾವನ್ನಪ್ಪಿದ್ದು, ಮತ್ತೋರ್ವ ಪ್ರಸಾದ್ ಎಂಬಾತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಿಬ್ಬರೂ ಬೈಕ್ ಸವಾರರು.
ನೆಲ್ಯಾಡಿಯ ಹೋಟೆಲ್ ಒಂದರಲ್ಲಿ ಕೆಲಸಕ್ಕಿದ್ದ ಉತ್ತರಪ್ರದೇಶ ಮೂಲದ ಸೋನು ಮತ್ತು ಕಾರ್ಕಳ ನಿವಾಸಿ ಪ್ರಸಾದ್, ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭ ಮಾರಿಪಳ್ಳ ಜಂಕ್ಷನ್ ನಲ್ಲಿ ಇರಿಸಲಾಗಿದ್ದ ಬ್ಯಾರಿಕೇಟ್ ಗೆ ಡಿಕ್ಕಿ ಹೊಡೆದಿದ್ದಾರೆ. ಲಾರಿಯೊಂದನ್ನು ಓವರ್ ಟೇಕ್ ಮಾಡುವ ಸಂದರ್ಭ ಬ್ಯಾರಿಕೇಟ್ ಗಮನಿಸದೆ ಈ ಅವಘಡ ನಡೆದಿದೆ. ಈ ಸಂದರ್ಭ ಇಬ್ಬರೂ ರಸ್ತೆಗೆಸೆಯಲ್ಪಟ್ಟು, ಲಾರಿಯ ಚಕದ್ರದಡಿ ಬಿದ್ದಿದ್ದಾರೆ. ಈ ಸಂದರ್ಭ ಸೋನು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…