ಕಲ್ಲಡ್ಕ

ಮೂರು ದಿನಗಳ ಬಿ.ವಿ.ಕಾರಂತ ನೆನಪಿನ ಮಂಚಿ ನಾಟಕೋತ್ಸವಕ್ಕೆ ಚಾಲನೆ

ಜಾಹೀರಾತು

ಮಂಚಿಯ ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕುಕ್ಕಾಜೆಯ ಶ್ರೀ ಸಿದ್ದಿವಿನಾಯಕ  ಭಜನಾ ಮಂದಿರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಬಿ.ವಿ.ಕಾರಂತ ನೆನೆಪಿನ ಮಂಚಿ ನಾಟಕೋತ್ಸವಕ್ಕೆ ಅಂತಾರಾಷ್ಟ್ರೀಯ ಖ್ಯಾತಿಯ ಜಾದೂಗಾರ ಪ್ರೊ. ಶಂಕರ್ ಚಾಲನೆ ನೀಡಿದರು.

ಬಳಿಕ ಕಾರಂತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರು, ಬಿ.ವಿ.ಕಾರಂತ, ಜಿ.ವಿ. ಅಯ್ಯರ್ ಅವರಂತಹ ಶ್ರೇಷ್ಠ ಸಾಧಕರೊಂದಿಗಿನ ಒಡನಾಟ ನನ್ನ ಬದುಕಿಗೆ ಧನ್ಯತೆ ನೀಡಿದೆ ಎಂದರು. ಮ್ಯಾಜಿಕ್ ಮತ್ತು ನಾಟಕ ಎರಡರ ನಡುವಿನ ಸಾಮ್ಯತೆ ಕುರಿತು ವಿವರಿಸಿದ ಅವರು, ನಾಟಕದಲ್ಲಿ ಮ್ಯಾಜಿಕ್ ಬೇಕು, ಮ್ಯಾಜಿಕ್ ನಲ್ಲೂ ನಾಟಕ ಬೇಕು ಎಂದರು.

ಶಿವಮೊಗ್ಗ ರಂಗಾಯಣದ ಮಾಜಿ ನಿರ್ದೇಶಕ ಸಂದೇಶ್ ಜವಳಿ ಅಧ್ಯಕ್ಷತೆ ವಹಿಸಿ ಮಾತನಾಡಿ ಮಂಚಿ ಎನ್ನುವ ಚಿಕ್ಕ ಹಳ್ಳಿಯಿಂದ ಬಂದ ವ್ಯಕ್ತಿ ಬಿ.ವಿ.ಕಾರಂತ, ಭಾರತೀಯ ರಂಗಭೂಮಿಗೆ ವಿಶ್ವಮಾನ್ಯತೆ ತಂದುಕೊಟ್ಟರು, ವಿಭಿನ್ನ, ವಿಶೇಷ ಪ್ರಯೋಗವನ್ನು ನಾಟಕಕ್ಕೆ ನೀಡಿದವರು ಎಂದರು. ರಂಗಭೂಮಿಗೆ ಸಂಬಂಧಪಟ್ಟ ಕೆಲಸ,‌ ಅಧ್ಯಯನ, ಸಂಶೋಧನೆ, ವಿಚಾರ ಸಂಕಿರಣ ಕಾರಂತರ ಹುಟ್ಟೂರಲ್ಲಿ ಆಗಬೇಕಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿ  ಕ್ಯಾಂಪ್ಕೋ ನಿರ್ದೇಶಕ  ಡಾ. ಜಯಪ್ರಕಾಶ್ ನಾರಾಯಣ ಟಿ.ಕೆ. ಮಾತನಾಡಿ ಸಿನಿಮಾಗಳಲ್ಲಿ ಹೊಸತನದ ಕಲ್ಪನೆಯನ್ನು ಪರಿಚಯಿಸಿದವರು ಬಿ.ವಿ.ಕಾರಂತರು ಎಂದರು. ನಾಟಕದಲ್ಲಿ ಹಾಸ್ಯವೇ ಪ್ರಧಾನವಾಗುತ್ತಿರುವ ಈ ಕಾಲಘಟ್ಟದಲ್ಲಿ ನವ್ಯ ನಾಟಕಗಳು ರುಚಿಸುತ್ತವೇಯೇ ಎನ್ನುವ ಸಂದಿಗ್ದತೆಯಲ್ಲಿ ರಂಗಭೂಮಿಕ ಟ್ರಸ್ಟ್ ಪ್ರತಿ ವರ್ಷ ರಂಗ ನಾಟಕವನ್ನು‌ ನಡೆಸಿಕೊಂಡು ಬರುತ್ತಿರುವುದು ಅಭಿನಂದನೀಯ ಆ ಮೂಲಕ  ಕಲೆ ಹಾಗೂ  ಕಲಾವಿದರನ್ನು ಉಳಿಸಿ ಬೆಳೆಸಿ ಕೊಂಡು ಬರುತ್ತಿದೆ ಎಂದರು.

ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಅಧ್ಯಕ್ಚ ಕಜೆ ರಾಮಚಂದ್ರ ಭಟ್ ಸ್ವಾಗತಿಸಿದರು. ಉಮಾನಾಥ ರೈ ಮೇರಾವು, ಹಾಗೂ ಬಾಲಕೃಷ್ಣ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ನಟ ಮಿತ್ರರು ತೀರ್ಥಹಳ್ಳಿ ಅವರಿಂದ ಸಂಸಾರದಲ್ಲಿ ಸನಿದಪ ನಾಟಕ ನಡೆಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಎಲ್ಲರಿಗೂ, ಎಲ್ಲೆಡೆಯೂ ಆರೋಗ್ಯ, ಜಾಗೃತಿಗೆ ಬೀದಿನಾಟಕ

ಬಂಟ್ವಾಳದ ಹಲವೆಡೆ ಸಂಸಾರ ಜೋಡುಮಾರ್ಗ ತಂಡದಿಂದ ಕಾರ್ಯಕ್ರಮ, ಸಾರ್ವಜನಿಕರಿಗೆ ಮಾಹಿತಿ (more…)

18 hours ago