ಬಂಟ್ವಾಳ

ಲಕ್ಷ್ಮೀಶ ತೋಳ್ಪಾಡಿಯವರೊಂದಿಗೆ ಒಂದು ಸಂಜೆ: ಬಿ.ಸಿ.ರೋಡ್ ನಲ್ಲಿ ‘ಅಭಿರುಚಿ’ ಜೋಡುಮಾರ್ಗದ ಕಾರ್ಯಕ್ರಮದ ವಿವರಗಳು ಇಲ್ಲಿವೆ

ಜಾಹೀರಾತು

ಸಾಹಿತ್ಯಕ ಮತ್ತು ಸಾಂಸ್ಕೃತಿಕ ವೇದಿಕೆಯಾದ ‘ಅಭಿರುಚಿ’ ಜೋಡುಮಾರ್ಗ ವತಿಯಿಂದ ಬಿ.ಸಿ.ರೋಡಿನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಭಾನುವಾರ ಮೇ.26ರಂದು ಸಂಜೆ 3.30ಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ  ಪುರಸ್ಕೃತ ಚಿಂತಕ ಮತ್ತು ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರೊಂದಿಗೆ ಒಂದು ಸಂಜೆ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭ ಅಭಿನಂದನಾ ಕಾರ್ಯಕ್ರಮ, ಸಂವಾದ ಹಾಗೂ ಯಕ್ಷಗಾನ ಪ್ರದರ್ಶನಗಳು ಏರ್ಪಡಲಿವೆ ಎಂದು ಪ್ರಕಟಣೆ ತಿಳಿಸಿದೆ. ಪ್ರಶಸ್ತಿ ಪುರಸ್ಕೃತ ಕೃತಿ ಮಹಾಭಾರತ ಅನುಸಂಧಾನದ ಭಾರತ ಯಾತ್ರೆ ಕುರಿತಾಗಿ ಸಂವಾದ ಕಾರ್ಯಕ್ರಮ ನಡೆಯಲಿದೆ. ಕೃತಿಯ ಬಗ್ಗೆ  ಅವಲೋಕನವನ್ನು ಲೇಖಕ ಪೃಥ್ವಿರಾಜ್ ಕವತ್ತಾರ್ ನಡೆಸಿಕೊಡಲಿದ್ದಾರೆ. ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಅಧ್ಯಕ್ಷ ನ್ಯಾಯವಾದಿ ಕಜೆ ರಾಮಚಂದ್ರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಉಡುಪಿಯ ಶಾಸ್ತ್ರೀಯ ಯಕ್ಷಮೇಳದವರಿಂದ ಗುರುರಾಜ ಮಾರ್ಪಳ್ಳಿ ನಿರ್ದೇಶನದಲ್ಲಿ ವಿಶಿಷ್ಟ ಬಡಗುತಿಟ್ಟು ಯಕ್ಷಗಾನ ಪ್ರಯೋಗ ಋತುಪರ್ಣ ಯಕ್ಷಗಾನ ಪ್ರಯೋಗ  ಪ್ರದರ್ಶನಗೊಳ್ಳಲಿದೆ ಎಂದು ಅಭಿರುಚಿಯ ಪ್ರಕಟಣೆ ತಿಳಿಸಿದೆ.

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.