ಬಂಟ್ವಾಳ

ಶೌರ್ಯ ವಿಪತ್ತು ತಂಡದಿಂದ ಗೋಳ್ತಮಜಲು ಶಾಲೆ ಅಪಾಯಕಾರಿ ಕೊಠಡಿ ತೆರವು

ಬಂಟ್ವಾಳನ್ಯೂಸ್ ನಲ್ಲಿ ಮೇ 11ರಂದು ಪ್ರಕಟವಾದ ವರದಿಗೆ ಸ್ಪಂದನೆ ದೊರಕಿದೆ. ಗೋಳ್ತಮಜಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಅಪಾಯಕಾರಿಯಾದ ಎರಡು ಕೊಠಡಿಗಳು ಶಾಲಾರಂಭ ಸಮಯ ಮಕ್ಕಳಿಗೆ ತೊಂದರೆಯಾಗಬಹುದು ಎಂಬ ಹಿನ್ನೆಲೆಯಲ್ಲಿ ಭಾನುವಾರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯದ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನದ ಮೂಲಕ ತೆರವು ಮಾಡಿದೆ.

ಗೋಳ್ತಮಜಲು ಸರಕಾರಿ ಶಾಲೆಯಲ್ಲೊಂದು ತೆರವಾಗದ ಅಪಾಯಕಾರಿ ಕಟ್ಟಡ: ಹೆಣ್ಣುಮಕ್ಕಳ ಶೌಚಗೃಹದ ಪಕ್ಕವೇ ತಲೆಗೆ ಬೀಳುವ ಸ್ಥಿತಿ!!

ಜಾಹೀರಾತು

ಜಾಹೀರಾತು

ಭಾನುವಾರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯದ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನದ ಮೂಲಕ ತೆರವು ಮಾಡಿದೆ. ತಾಲೂಕು ಯೋಜನೆ ಅಧಿಕಾರಿ ರಮೇಶ್, ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷ ಮಾಧವ ಸಾಲಿಯಾನ್ ಕುದ್ರೆಬೆಟ್ಟು, ತಂಡದ ಸಂಯೋಜಕ ವಿದ್ಯಾ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸುಮಾ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವೆಂಕಪ್ಪ, ಓಂ ಶ್ರೀ ಸಾಯಿ ಗಣೇಶ್ ಸೇವಾ ಟ್ರಸ್ಟ್ ನ ರಾಮಚಂದ್ರ, ಚಿದಾನಂದ ಚೇತನ್, ಮೊದಲಾದವರ ಉಪಸ್ಥಿತರಿದ್ದರು. ಕಾರ್ಯಕ್ರಮದ ಜೊತೆಗೆ ಕೈಜೋಡಿಸಿದ ಓಂ ಶ್ರೀ ಸಾಯಿ  ಗಣೇಶ್ ಸೇವಾ ಟ್ರಸ್ಟ್ ಗೊಳ್ತಮಜಲು ಸಹಕರಿಸಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ