ಸ್ವಸ್ಥ ಭಾರತಕ್ಕಾಗಿ ಸ್ವಚ್ಛ ಪರಿಸರ: ಕಲ್ಲಡ್ಕ ಶ್ರೀರಾಮ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರಸಂಕಿರಣ

ಕಲ್ಲಡ್ಕದ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಸ್ವಸ್ಥ ಭಾರತಕ್ಕಾಗಿ ಸ್ವಚ್ಛ ಪರಿಸರ ವಿಷಯದ ಕುರಿತ ರಾಷ್ಟ್ರೀಯ ವಿಚಾರಸಂಕಿರಣ ಶನಿವಾರ ಜೂನ್ 1ರಂದು ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.

ಬುಧವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಕೃತಿಯ ಅವಗಣನೆ ಆಗುತ್ತಿರುವ ಈ ಹೊತ್ತಿನಲ್ಲಿ ಪರಿಸರದ ಮಹತ್ವದ ಕುರಿತು ಚಿಂತನೆ ನಡೆಸುವುದು ಹಾಗೂ ಮುಂದಿನ ಪೀಳಿಗೆಗೆ ಮಹತ್ವವನ್ನು ತಿಳಿಸುವ ುದ್ದೇಶದಿಂದ ವಿಚಾರಸಂಕಿರಣ ಆಯೋಜಿಸಲಾಗಿದೆ. ಭಾರತ ಸ್ವಸ್ಥವಾಗಿರಬೇಕಾದರೆ, ಪಂಚಭೂತಗಳನ್ನು ಸ್ವಚ್ಛವಾಗಿರಿಸಿಕೊಳ್ಳುವ ಹೊಣೆಗಾರಿಕೆ ನಮ್ಮದಾಗಿದ್ದು, ಪರಿಸರವನ್ನು ಶ್ರೀಮಂತಗೊಳಿಸುವ ವೈಚಾರಿಕ ಕಾರ್ಯಕ್ರಮವಿದು ಎಂದು ಹೇಳಿದರು.

ಡಾ. ಪ್ರಭಾಕರ ಭಟ್ ಮಾತನಾಡಿದರು

ಅದಮ್ಯ ಚೇತನ ಫೌಂಡೇಶನ್ ಸಂಸ್ಥಾಪಕಿ ತೇಜಸ್ವಿನಿ ಅನಂತಕುಮಾರ್ ಅವರು ಬೆಳಗ್ಗೆ 9.45ಕ್ಕೆ ಆರಂಭವಾಗುವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೊದಲನೇ ಗೋಷ್ಠಿಯಲ್ಲಿ ಪರಿಸರ ಚಿಂತಕ ಶಿವಾನಂದ ಕಳವೆ ಜಲ ಮರ ಜಾಗೃತಿಯ ದೇಸಿ ದಾರಿ ಕುರಿತು ಮಾತನಾಡುವರು. ಎರಡನೇ ಗೋಷ್ಠಿಯಲ್ಲಿ ಸಾಫ್ಟ್ ವೇರ್ ಇಂಜನಿಯರ್ ಹಾಗೂ ಸಾವಯವ ಕೃಷಿಕ ವಸಂತ ಕಜೆ ಅವರು ಮಣ್ಣು ಮತ್ತು ಆಹಾರ ವಿಷಮುಕ್ತವಾಗುವತ್ತ ಕುರಿತು ಮಾತನಾಡಲಿದ್ದಾರೆ. ಬಳಿಕ ಸಮಗ್ರ ತ್ಯಾಜ್ಯ ನಿರ್ವಹಣೆಯ ವಿವಿಧ ಆಯಾಮಗಳ ಕುರಿತು ರಾಜ್ಯ ಪರಿಸರ ಆಘಾತ ಅಂದಾಜೀಕರಣ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಡಾ. ಕೆ.ಆರ್ ಶ್ರೀಹರ್ಷ ಮಾತನಾಡಲಿದ್ದು, ಆರಾಧನೆ ಮತ್ತು ನಂಬಿಕೆಗಳಲ್ಲಿ ಪರಿಸರ ಉಳಿವಿನ ದೃಷ್ಟಿ ಕುರಿತು ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ನರೇಂದ್ರ ರೈ ದೇರ್ಲ ಮಾತನಾಡುವರು. ಅಪ್ಲೈಡ್ ಸಿಸ್ಟಮ್ಸ್ ಇಂಡಿಯಾ ಪ್ರೈ.ಲಿ. ಉಪಾಧ್ಯಕ್ಷ ಹಾಗೂ ಪರ್ಯಾವರಣ ಸಂರಕ್ಷಣಾ ಗತಿವಿಧಿ ಪ್ರಾಂತ ಸಂಯೋಜಕ ವೆಂಕಟೇಶ ಸಂಗನಾಳ ಪರಿಸರಸ್ನೇಹಿ ಜೀವನ ಪದ್ಧತಿ ಕುರಿತು ವಿಚಾರ ಮಂಡಿಸಲಿದ್ದಾರೆ ಎಂದರು. ಒಂದು ಸಂಸ್ಥೆಯಿಂದ ನಾಲ್ವರು ವಿದ್ಯಾರ್ಥಿಗಳು ಹಾಗೂ ಓರ್ವ ಪ್ರಾಧ್ಯಾಪಕರು ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ಸಾವಿರದಷ್ಟು ಪ್ರತಿನಿಧಿಗಳು ಸೇರುವ ನಿರೀಕ್ಷೆ ಇದೆ ಎಂದವರು ತಿಳಿಸಿದರು. ಈ ಸಂದರ್ಭ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಪ್ರಿನ್ಸಿಪಾಲ್ ಕೃಷ್ಣಪ್ರಸಾದ ಕಾಯರ್ ಕಟ್ಟೆ ಉಪಸ್ಥಿತರಿದ್ದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸ್ವಸ್ಥ ಭಾರತಕ್ಕಾಗಿ ಸ್ವಚ್ಛ ಪರಿಸರ: ಕಲ್ಲಡ್ಕ ಶ್ರೀರಾಮ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರಸಂಕಿರಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*