ಕಲ್ಲಡ್ಕ

ಸೂರಿಕುಮೇರು ಚರ್ಚ್ ಗೆ ನೂತನ ಧರ್ಮಗುರು: ವಂದನೀಯ ನವೀನ್ ಪ್ರಕಾಶ್ ಡಿಸೋಜ ಅಧಿಕಾರ ಸ್ವೀಕಾರ

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ 26 ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಠಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು.

ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ ಹುಟ್ಟಿ ಬೆಳೆದ ಇವರು 2005 ನೇ ವರ್ಷದಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಇವರಿಂದ ಗುರುದೀಕ್ಷೆಯನ್ನು ಪಡೆದು, ವಿಟ್ಲ, ಬಿಜೈ ಚರ್ಚ್ ಗಳಲ್ಲಿ ಸಹಾಯಕ ಧರ್ಮಗುರು ಹಾಗೂ ಕಾಸರಗೋಡು, ತಾಕೊಡೆ ಮತ್ತು ಬಾಂಬಿಲ್ ಚರ್ಚ್ ಗಳಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸಿ ಇದೀಗ ಸೂರಿಕುಮೇರು ಬೊರಿಮಾರ್ ಧರ್ಮಕೇಂದ್ರದ ಧರ್ಮಗುರುಗಳಾಗಿ ಅಧಿಕಾರ ಸ್ವೀಕರಿಸಿದರು.

ಬಂಟ್ವಾಳ ಮತ್ತು ವಿಟ್ಲ ವಲಯದ ಧರ್ಮಗುರುಗಳು, ಸೂರಿಕುಮೇರು ಚರ್ಚ್ ಉಪಾಧ್ಯಕ್ಷ ಸ್ಟೀವನ್ ಪ್ರಕಾಶ್ ಮಾರ್ಟಿಸ್, ಕಾರ್ಯದರ್ಶಿ ಸ್ಟೀವನ್ ಆಲ್ವಿನ್ ಪಾಯ್ಸ್, ಆಯೋಗಗಳ ಸಂಯೋಜಕ ಎಲಿಯಾಸ್ ಪಿರೇರಾ, ಬಾಂಬಿಲ್ ಹಾಗೂ ಸೂರಿಕುಮೇರು ಚರ್ಚ್ ನ ನೂರಾರು ಭಕ್ತಾಧಿಗಳು ಉಪಸ್ಥಿತರಿದ್ದರು.  ಕೃಷಿ ಕ್ಷೇತ್ರದಲ್ಲಿ ಪಪ್ಪಾಯಿ ಫಾದರ್ ಎಂದೇ ಜಗತ್ಪ್ರಸಿದ್ಧರಾಗಿದ್ದ ಹಾಗೂ ಸೂರಿಕುಮೇರು ಚರ್ಚ್ ಅಭಿವೃದ್ಧಿ ಪಡಿಸಿ ಇಡೀ ಪರಿಸರವನ್ನೇ ಬದಲಾಯಿಸಿ ಭಕ್ತಾಧಿಗಳಿಗೆ ದಿಗ್ಭ್ರಮೆಗೊಳಿಸಿದ ಈ ಹಿಂದೆ ಧರ್ಮಗುರುವಾಗಿದ್ದ ವಂದನೀಯ ಗ್ರೆಗರಿ ಪಿರೇರಾರವರನ್ನು ತಲಪಾಡಿ ಮರಿಯಾಶ್ರಮ್ ಧರ್ಮಕೇಂದ್ರಕ್ಕೆ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ಆದೇಶದಂತೆ ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ನೂತನ ಧರ್ಮಗುರುಗಳ ಆಗಮನವಾಗಿದೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.