ಬಂಟ್ವಾಳ

ಬಹುಮತ ಇದೆ ಎಂದು ಬೇಕಾಬಿಟ್ಟಿ ವರ್ತಿಸುತ್ತಿರುವ ಕಾಂಗ್ರೆಸ್ – ಬಂಟ್ವಾಳದಲ್ಲಿ ಪ್ರತಾಪ್ ಸಿಂಹ ನಾಯಕ್ ಟೀಕೆ

ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿದರು. ಶಾಸಕ ರಾಜೇಶ್ ನಾಯ್ಕ್ ಸಹಿತ ಪಕ್ಷ ಪ್ರಮುಖರು ಉಪಸ್ಥಿತರಿದ್ದರು.

ಕಾಂಗ್ರೆಸ್ ಸರಕಾರದ ನೀತಿಗಳಿಂದ ಜನರಿಗೆ ತೊಂದರೆ ಆಗಿದ್ದು, ಅಧಿಕಾರದ ಬಹುಮತ ಇದೆ ಎಂದು ಜನವಿರೋಧಿಯಾಗಿ ತನಗೆ ಬೇಕಾದಂತೆ ವರ್ತಿಸುತ್ತಿದೆ, ಈ ಬಾರಿ ಪದವೀಧರರು ಮತ್ತು ಶಿಕ್ಷಕ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದ್ದಾರೆ.ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ವಿಚಾರದಲ್ಲಿ ಸರಕಾರ ಹಾಗೂ ಮಂತ್ರಿಗಳು ವರ್ತಿಸುತ್ತಿರುವ ರೀತಿಯಲ್ಲೇ ಇದು ಗೊತ್ತಾಗುತ್ತದೆ, ಅವ್ಯವಹಾರದಲ್ಲಿ ಯಾರ್ಯಾರಿದ್ದಾರೆ ಎಂಬುದು ನಿಷ್ಪಕ್ಷಪಾತ ತನಿಖೆಯಿಂದ ಗೊತ್ತಾಗಬೇಕು, ಹೀಗಾಗಿ ಸಿಬಿಐ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.ಸರಕಾರದ ಕುರಿತ ಜನಾಭಿಪ್ರಾಯವನ್ನು ಈ ಚುನಾವಣೆ ರೂಪಿಸುತ್ತದೆ, ಇದರಲ್ಲಿ ನಾವು ಗೆದ್ದು ಬರಲಿದ್ದೇವೆ. ಬಿಜೆಪಿ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಕುರಿತು ಇರುವ ಟೀಕೆಗಳು ಆಧಾರರಹಿತವಾಗಿದ್ದು, ಅದಕ್ಕೆ ಸೂಕ್ತ ಉತ್ತರವನ್ನು ಕೊಡಲಾಗಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ಪಕ್ಷ ಪ್ರಮುಖರಾದ ದಿನೇಶ್ ಅಮ್ಟೂರು, ಮೋನಪ್ಪ ದೇವಸ್ಯ, ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ