ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ: ನಿವೃತ್ತ ಸಿಇಒಗೆ ಬೀಳ್ಕೊಡುಗೆ

ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ಮತ್ತು ಪಾಣೆಮಂಗಳೂರು ಸಹಕಾರಿ ಸಂಘದಲ್ಲಿ 36 ವರ್ಷಗಳ ಕಾಲ ಕರ್ತವ್ಯ ಸಲ್ಲಿಸಿ 10 ವರ್ಷಗಳ ಕಾಲ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಜವಾಬ್ದಾರಿ ನಿರ್ವಹಿಸಿ ವಯೋನಿವೃತ್ತಿ ಹೊಂದಿರುವ ಸುರೇಶ್ ಕೆ ಅವರಿಗೆ ಬೀಳ್ಕೊಡುಗೆ ಹಾಗೂ ಬಂಟ್ವಾಳ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಪ್ರತಿನಿಧಿಯಾಗಿ ಪ್ರತಿಷ್ಠಿತ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಸತತ ಆರನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾದ ಟಿ.ಜಿ. ರಾಜಾರಾಮ್ ಭಟ್ ಅವರಿಗೆ ಅಭಿನಂದನಾ ಸಮಾರಂಭ ಮುಖ್ಯ ಕಾರ್ಯನಿರ್ವಣಾಧಿಕಾರಿಗಳ ಒಕ್ಕೂಟದ ವತಿಯಿಂದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬಿಸಿರೋಡು ಶಾಖೆಯ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು

ಅಧ್ಯಕ್ಷತೆಯನ್ನು ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಟಿ. ಜಿ. ರಾಜಾರಾಮ್ ಭಟ್ ವಹಿಸಿದ್ದರು.ಈ ಸಂದರ್ಭ ಮಾತನಾಡಿದ ಅವರು ಕಷ್ಟಕರ ಪರಿಸ್ಥಿತಿಯಲ್ಲಿ ಸಂಘವನ್ನು ಮುನ್ನೆಡೆಸಿದ ಕೀರ್ತಿ ಸಿಬಂದಿಗೆ ಸಲ್ಲುತ್ತದೆ. ಸಹಕಾರದಿಂದ ಕೆಲಸ ಮಾಡಿದಾಗ ಮಾತ್ರ ಸಹಕಾರಿ ಸಂಘಗಳು ಎತ್ತರಕ್ಕೆ ಬೆಳೆಯುತ್ತದೆ ಎಂದರು. ದ.ಕ ಸಹಕಾರಿ ಸಂಘಗಳ ಉಪನಿಬಂಧಕ ರಮೇಶ್ ಎಚ್ಎನ್ ಶುಭ ಹಾರೈಸಿದರು. ಸಹಕಾರ ಅಭಿವೃದ್ಧಿ ಅಧಿಕಾರಿ ಗೋಪಾಲ ಎನ್.ಜೆ, ಡಿಸಿಸಿ ಬ್ಯಾಂಕ್ ಉಪ ಮಹಾಪ್ರಬಂಧಕಿ ಶರ್ಮಿಳಾ ಭಟ್, ಡಿಸಿಸಿ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಗಣೇಶ್ ಕಾರಂತ, ವಲಯ ಮೇಲ್ವಿಚಾರಕರುಗಳಾದ ಯೋಗೀಶ್ ಎಚ್, ಕೀರ್ತಿರಾಜ್ ಹಾಗೂ ತಾಲೂಕಿನ ಸಹಕಾರಿ ಸಂಘಗಳ ಮುಖ್ಯ ‌ಕಾರ್ಯನಿರ್ವಣಾಧಿಕಾರಿಗಳು ಉಪಸ್ಥಿತರಿದ್ದರು. ಒಕ್ಕೂಟದ ಅಧ್ಯಕ್ಷ ಸುಧಾಕರ ಶೆಟ್ಟಿ ಸ್ವಾಗತಿಸಿ, ಒಕ್ಕೂಟದ ಉಪಾಧ್ಯಕ್ಷ ಅಲ್ಬೆರ್ಟ್ ಡಿ.ಸೋಜ ವಂದಿಸಿದರು. ಕಾರ್ಯದರ್ಶಿ ಈಶ್ವರ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ: ನಿವೃತ್ತ ಸಿಇಒಗೆ ಬೀಳ್ಕೊಡುಗೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*