ಗ್ರಾಪಂ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಪ್ರಗತಿ ಪರಿಶೀಲನಾ ಸಭೆ

ಬಂಟ್ವಾಳ ತಾಲೂಕು ಪಂಚಾಯಿತಿ ಎಸ್. ಜಿ. ಎಸ್. ವೈ ಸಭಾಂಗಣದಲ್ಲಿ ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ  ಗ್ರಾಮ ಪಂಚಾಯತ್ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಬಂಟ್ವಾಳದ 51 ಗ್ರಾಮ ಪಂಚಾಯತ್, ಉಳ್ಳಾಲದ 7 ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಆಗಮಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕ ಕೆ. ಇ ಜಯರಾಮ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ವಿಶ್ವನಾಥ್ ಬೈಲಾಮೂಲೆ ಮಾತನಾಡಿ, ಪಂಚಾಯತ್ ಮಟ್ಟದಲ್ಲಿ ತ್ಯಾಜ್ಯ ವಿಲೇವಾರಿ ಜವಾಬ್ದಾರಿ ಒಕ್ಕೂಟದಾಗಿದ್ದು, ಒಕ್ಕೂಟ ಹಾಗೂ ಪಂಚಾಯತ್ ನಡುವೆ ಈಗಾಗಲೇ ಒಪ್ಪಂದವಾಗಿದ್ದು,ಎಲ್ಲಾ ಪಂಚಾಯತ್ ಗಳಲ್ಲೂ  ಸರಕಾರದ ಆದೇಶದಂತೆ ಒಕ್ಕೂಟದ ಸಿಬ್ಬಂದಿಗಳೇ ತ್ಯಾಜ್ಯ ವಿಲೇವಾರಿಯ ಕಾರ್ಯ ನಿರ್ವಹಿಸಬೇಕು. ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಗಳನ್ನು ಪಂಚಾಯತ್ ವತಿಯಿಂದ ಒದಗಿಸಲಾಗುವುದು. ಉದ್ಯೋಗ ಖಾತರಿ ಯೋಜನೆಯ ಒಗ್ಗೂಡಿಸುವಿಕೆಯೊಂದಿಗೆ ಪ್ರತಿಯೊಂದು ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 75 ಕೃಷಿ ಪೌಷ್ಟಿಕ ತೋಟ ರಚನೆ ಮಾಡಬೇಕಿದ್ದು, ಒಕ್ಕೂಟದ ಮೂಲಕ ಫಲಾನುಭವಿಗಳ ಆಯ್ಕೆ ಮಾಡಬೇಕೆಂದು ತಿಳಿಸಿದರು.

ಉದ್ಯೋಗ ಖಾತರಿ ಯೋಜನೆಯ ಬಂಟ್ವಾಳ ತಾಲೂಕು ಐ ಇ ಸಿ ಸಂಯೋಜಕ ರಾಜೇಶ್ ಮಾತನಾಡಿ, ಕೃಷಿ ಪೌಷ್ಟಿಕ ತೋಟ ರಚನೆಯ ತಾಂತ್ರಿಕ ವಿಷಯದ ಬಗ್ಗೆ ಮಾಹಿತಿ ನೀಡಿದರು.

ಸಂಜೀವಿನಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಸಭೆಯಲ್ಲಿ ಉಪಸ್ಥಿತರಿದ್ದು, ಲೋಕೋಸ್ ನ ಪ್ರಗತಿ, ಸಮುದಾಯ ಬಂಡವಾಳ ನಿಧಿ ವಿತರಣೆ, ಕೃಷಿ ಮತ್ತು ಕೃಷಿಯೇತರ ಜೀವನೋಪಾಯ ಚಟುವಟಿಕೆ, ಕೃಷಿಯೇತರ ಚಟುವಟಿಕೆ ಪ್ರಮಾಣ ಪತ್ರ, ಬ್ಯಾಂಕ್ ಸಂಪರ್ಕ, ಸಾಮಾಜಿಕ ವಿಮೆ, ಗುಂಪು ಉದ್ಯಮ, ಉತ್ಪಾದಕರ ಗುಂಪು, ಲೆಕ್ಕ ಪರಿಶೋಧನೆ, 2024-25 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದರು.

ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಪ್ರಕಾಶ್, ಸಂಜೀವಿನಿ ಜಿಲ್ಲಾ ವ್ಯವಸ್ಥಾಪಕಿ ವಾಣಿಶ್ರೀ,ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಸುಧಾ, ವಲಯ ಮೇಲ್ವಿಚಾರಕರಾದ ಕುಶಾಲಪ್ಪ ಗೌಡ, ಪ್ರೀತಿಕಾ ಉಪಸ್ಥಿತರಿದ್ದರು. ಸಂಜೀವಿನಿ ಬಂಟ್ವಾಳ ತಾಲೂಕು ವ್ಯವಸ್ಥಾಪಕರಾದ ಪ್ರದೀಪ್ ಕಾಮತ್ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಕುಸುಮ ವಂದಿಸಿದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗ್ರಾಪಂ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಪ್ರಗತಿ ಪರಿಶೀಲನಾ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*