ಬಡವರ ಪರ ಕೆಲಸ ಮಾಡಿದವರಿಗೆ ಗೌರವ ಅರ್ಥಪೂರ್ಣ: ಹೋರಾಟಗಾರ ಪ್ರಭಾಕರ ದೈವಗುಡ್ಡೆ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈ

ಸನ್ಮಾನ ಕಾರ್ಯಕ್ರಮ ನಡೆಯಿತು.

ಬಂಟ್ವಾಳ: ಜೀವನಪೂರ್ತಿ ಬಡವರ, ಶ್ರಮಿಕರ ಪರ ಹಾಗೂ ಸಾಮಾಜಿಕ ಸಮಸ್ಯೆಗಳ ನಿವಾರಣೆಗೆ ತನ್ನ ಶಕ್ತಿಮೀರಿ ಪ್ರಯತ್ನಿಸಿದವರನ್ನು ಗುರುತಿಸಿ ಗೌರವಾರ್ಪಣೆ ಮಾಡುವ ಕಾರ್ಯ ಅರ್ಥಪೂರ್ಣವಾದ ಆಚರಣೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಜಾಹೀರಾತು

 ಸಾಮಾಜಿಕ ನ್ಯಾಯ ಪರ ಹೋರಾಟ ಸಮಿತಿಯ ಸ್ಥಾಪಕರೂ, ಸಮಾನ ಮನಸ್ಕ ಸಂಘಟನೆಯ ಸಮನ್ವಯ ಸಮಿತಿಯ ನಿಕಟಪೂರ್ವ ಅಧ್ಯಕ್ಷರೂ, ಜನಪರ ಹೋರಾಟಗಾರ ಬಿ.ಎಂ.ಪ್ರಭಾಕರ ದೈವಗುಡ್ಡೆ ಅವರಿಗೆ ಸಮಾನ ಮನಸ್ಕ ಸಮನ್ವಯ ಸಂಘಟನೆಗಳ ವತಿಯಿಂದ ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಭಾನುವಾರ ನಡೆದ ಸಾರ್ವಜನಿಕ ಗೌರವಾರ್ಪಣೆ  ಕಾರ್ಯಕ್ರಮದಲ್ಲಿ ಸನ್ಮಾನ ನೆರವೇರಿಸಿ ಮಾತನಾಡಿದರು.

ಪ್ರಭಾಕರ ದೈವಗುಡ್ಡೆ ಅವರು ತನ್ನೊಂದಿಗೆ ಹಲವು ಸಾಮಾಜಿಕ ಸಮಸ್ಯೆಗಳ ವಿಚಾರಗಳ ಕುರಿತು ಗಮನ ಸೆಳೆಯುತ್ತಿರುತ್ತಾರೆ, ಜನರಿಗಾಗಿ ಹಾಗೂ ಅವರ ಸಮಸ್ಯೆಗಳನ್ನು ನೀಗಿಸಲು ಮಿಡಿಯುವ ಅವರ ಕಾಳಜಿ ಸ್ತುತ್ಯರ್ಹ ಎಂದು ರೈ ಹೇಳಿದರು.

ಪ್ರಭಾಕರ ದೈವಗುಡ್ಡೆ ಅವರನ್ನು ಮಾಜಿ ಸಚಿವ ರಮಾನಾಥ ರೈ ಸನ್ಮಾನಿಸಿದರು.

ಸನ್ಮಾರ್ಗ ವಾರ ಪತ್ರಿಕೆಯ ಸಂಪಾದಕ ಎ.ಕೆ.ಕುಕ್ಕಿಲ ಮಾತನಾಡಿ, ಇಂದು ಮಾಧ್ಯಮಗಳು ಪಾಸಿಟಿವ್ ವಿಚಾರಗಳ ಕುರಿತು ಗಮನಹರಿಸಬೇಕಾದ ಅವಶ್ಯಕತೆ ಇದ್ದು, ಪ್ರಭಾಕರ ದೈವಗುಡ್ಡೆ ಅವರಂಥ ತೆರೆಮರೆಯಲ್ಲಿರುವವರ ಬೆಳಕು ಚೆಲ್ಲಬೇಕಾಗಿದೆ, ಯುವ ಜನತೆ ಇಂಥವರ ಸಾಧನೆಗಳನ್ನು ಪ್ರೇರಣೆಯಾಗಿ ಪಡೆದುಕೊಳ್ಳಬೇಕು ಎಂದರು.

ಮಾನವ ಬಂಧುತ್ವ ವೇದಿಕೆಯ ಮಂಗಳೂರು ವಿಭಾಗೀಯ ಸಂಚಾಲಕ ಕೆ.ಎಸ್.ಸತೀಶ್ ಕುಮಾರ್ ಮಾತನಾಡಿ, ಪ್ರಭಾಕರ ದೈವಗುಡ್ಡೆ ಅವರು ಶೋಷಿತರ ಪರ ಕೆಲಸ ಮಾಡುವ ಪರಿಯನ್ನು ಶ್ಲಾಘಿಸಿದರು.

ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳದ ಮಾಜಿ ಅಧ್ಯಕ್ಷ ಸಂದೀಪ್ ಸಾಲ್ಯಾನ್ ಪತ್ರಕರ್ತರೊಂದಿಗೆ ಪ್ರಭಾಕರ ದೈವಗುಡ್ಡೆ ಅವರ ಒಡನಾಟಗಳನ್ನು ವಿವರಿಸಿದರು. ಪತ್ರಕರ್ತ ಹರೀಶ ಮಾಂಬಾಡಿ ಹಾಗೂ ಸಾಮಾಜಿಕ ನ್ಯಾಯಪರ ಹೋರಾಟ ಸಮಿತಿಯ ಕೃಷ್ಣ ಅಲ್ಲಿಪಾದೆ ಮಾತನಾಡಿದರು. ಸಮಾನ ಮನಸ್ಕ ಸಮನ್ವಯ ಸಮಿತಿ ಗೌರವಾಧ್ಯಕ್ಷ ರಾಜ ಚಂಡ್ತಿಮಾರ್ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮೋಹನ್ ಶೆಟ್ಟಿ ಪಂಜಿಕಲ್ಲು ವಹಿಸಿದ್ದರು. ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್ ಸ್ವಾಗತಿಸಿದರು. ಕಾರ್ಮಿಕ ಮುಖಂಡ ಬಿ.ಶೇಖರ್ ಪ್ರಾಸ್ತಾವಿಕ ಮಾತನಾಡಿದರು. ಪತ್ರಕರ್ತ ಸಲೀಂ ಬೋಳಂಗಡಿ ಸನ್ಮಾನಪತ್ರ ವಾಚಿಸಿದರು. ಎಂ.ಎಚ್.ಮುಸ್ತಫಾ ಬೋಳಂಗಡಿ ವಂದಿಸಿದರು. ರಂಗಕರ್ಮಿ ಎಚ್.ಕೆ.ನಯನಾಡು ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಡವರ ಪರ ಕೆಲಸ ಮಾಡಿದವರಿಗೆ ಗೌರವ ಅರ್ಥಪೂರ್ಣ: ಹೋರಾಟಗಾರ ಪ್ರಭಾಕರ ದೈವಗುಡ್ಡೆ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಸಚಿವ ರಮಾನಾಥ ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*