ಮೂರನೇ ಬಾರಿಗೆ ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿ ಸಂಭ್ರಮಪಟ್ಟರು. ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷ ಹಾಕಿದರು. ಸಿಹಿ ಹಂಚಿದರು.
ಪಕ್ಷದ ಕಚೇರಿಯ ಹೊರಭಾಗದಲ್ಲಿ ಎಲ್. ಇ.ಡಿ ಪರದೆಯ ಮೂಲಕ ಪ್ರಮಾಣವಚನದ ನೇರಪ್ರಸಾರವನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು. ಬಂಟ್ವಾಳ ಕ್ಷೇತ್ರಾಧ್ಯಕ್ಷ ಚೆನ್ನಪ್ಪಕೋಟ್ಯಾನ್, ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಹರಿಪ್ರಸಾದ್ ಕುಲಾಲ್ , ಪಕ್ಷದ ಪ್ರಮುಖರಾಧ ಪುರುಷೋತ್ತಮ ಶೆಟ್ಟಿ, ಗಣೇಶ್ ರೈ ಮಾಣಿ, ಭಾರತಿ ಚೌಟ, ಸುದರ್ಶನ್ ಬಜ, ದಿನೇಶ್ ಅಮ್ಟೂರು, ಜನಾರ್ದನ ಬೊಂಡಾಲ, ವಿಜಯಕುಮಾರ್ ಅಮ್ಟಾಡಿ, ಮಚ್ಚೇಂದ್ರ ಸಾಲಿಯಾನ್, ಪ್ರಣಾಮ್ ಅಜ್ಜಿಬೆಟ್ಟು, ಸಂತೋಷ್ ರಾಯಿಬೆಟ್ಟು,ರೂಪೇಶ್ ಮೆಲ್ಕಾರ್,ಸುರೇಶ್ ಕೋಟ್ಯಾನ್ ಮೊದಲಾದವರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ನರೇಂದ್ರ ಮೋದಿ ಪ್ರಧಾನಿಯಾದ ಸಂಭ್ರಮ: ಬಿಜೆಪಿ ಬಂಟ್ವಾಳ ಕಚೇರಿಯಲ್ಲಿ ವಿಜಯೋತ್ಸವ"