ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅನುಷ್ಠಾನಕ್ಕೆ ಮನವಿ

ಬಂಟ್ವಾಳ: ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅನುಷ್ಠಾನಕ್ಕೆ ಮನವಿಯನ್ನು ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮಾಡಿದ್ದಾರೆ.

ಕೇಂದ್ರ ಸರಕಾರ ಜಾರಿಗೊಳಿಸಿದ ರಾಜ್ಯ ಸರಕಾರದ ಸಹಬಾಗಿತ್ವದ ಮಹತ್ವಾಕಾಂಕ್ಷಿ ಯೋಜನೆಯಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿಯಲ್ಲಿ ಕರಾವಳಿಯ ಬಹುತೇಕ ಅಡಿಕೆ ಬೆಳೆಗಾರರಿಗೆ ಹಾಗೂ ಕರಿಮೆಣಸು ಬೆಳೆಗಾರರಿಗೆ ಹವಾಮಾನ ವೈಪರೀತ್ಯದಿಂದಾಗಿ ನಷ್ಟ ಸಂಭವಿಸಿದ ಸಂದರ್ಭ ರೈತರ ಬಾಳಿನಲ್ಲಿ ಬೆಳಕು ಚೆಲ್ಲುವ ಯೋಜನೆಯಾಗಿದೆ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ವರ್ಷಂಪ್ರತಿ ಸಾವಿರಾರು ರೈತರಿಗೆ ಬೆಳೆ ವಿಮೆ ಪರಿಹಾರ ಮೊತ್ತ ಬಿಡುಗಡೆಯಾಗುತ್ತಿದ್ದು , 2024-25 ನೇ ಸಾಲಿನಲ್ಲಿ ಮುಂಗಾರು ಹಂಗಾಮಿಗೆ ಸದ್ರಿ ಯೋಜನೆಯನ್ನು  ಶೀಘ್ರವಾಗಿ ಅನುಷ್ಟಾನಗೊಳಿಸಿ, ಯೋಜನೆಯಲ್ಲಿ ರೈತರಿಗೆ ನೋಂದಣೆ ಮಾಡಲು 60 ದಿನಗಳ ಕಾಲಾವಕಾಶ ನೀಡಬೇಕಾಗುತ್ತದೆ. ಇದರಿಂದಾಗಿ ಸ್ಥಳೀಯ ಪ್ರಾಥಮಿಕ ಸಹಕಾರ ಸಂಘಗಳಿಗೆ ಹೆಚ್ಚಿನ ರೈತರನ್ನು ಈ ಯೋಜನೆಗೆ ಒಳಪಡಿಸಲು ಅನೂಕೂಲವಾಗುತ್ತದೆ ಎಂದವರು ಮಾಹಿತಿ ನೀಡಿದ್ದಾರೆ.

ಈ ಯೋಜನೆ ಸಂಬಂಧ ರೈತರು  ದಿನಂಪ್ರತಿ ಪ್ರಾಥಮಿಕ ಸಹಕಾರ ಸಂಘಗಳಿಗೆ ಕಛೇರಿಗಳಿಗೆ ಸಂಪರ್ಕಿಸಿ ಯೋಜನೆ ಸಂಬಂಧ ಬೆಳೆ ವಿಮೆ ಕಂತು ಪಾವತಿಸುವ ಬಗ್ಗೆ ವಿಚಾರಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ರೈತ ಪರವಾಗಿರುವ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿ ಅನುಷ್ಠಾನಗೊಳಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನನೀಡಬೇಕಾಗಿ ವಿನಂತಿಸಿದ್ದಾರೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅನುಷ್ಠಾನಕ್ಕೆ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*