ಬಂಟ್ವಾಳ

ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅನುಷ್ಠಾನಕ್ಕೆ ಮನವಿ

ಬಂಟ್ವಾಳ: ಮುಂಗಾರು ಹಂಗಾಮಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅನುಷ್ಠಾನಕ್ಕೆ ಮನವಿಯನ್ನು ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮಾಡಿದ್ದಾರೆ.

ಜಾಹೀರಾತು

ಕೇಂದ್ರ ಸರಕಾರ ಜಾರಿಗೊಳಿಸಿದ ರಾಜ್ಯ ಸರಕಾರದ ಸಹಬಾಗಿತ್ವದ ಮಹತ್ವಾಕಾಂಕ್ಷಿ ಯೋಜನೆಯಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿಯಲ್ಲಿ ಕರಾವಳಿಯ ಬಹುತೇಕ ಅಡಿಕೆ ಬೆಳೆಗಾರರಿಗೆ ಹಾಗೂ ಕರಿಮೆಣಸು ಬೆಳೆಗಾರರಿಗೆ ಹವಾಮಾನ ವೈಪರೀತ್ಯದಿಂದಾಗಿ ನಷ್ಟ ಸಂಭವಿಸಿದ ಸಂದರ್ಭ ರೈತರ ಬಾಳಿನಲ್ಲಿ ಬೆಳಕು ಚೆಲ್ಲುವ ಯೋಜನೆಯಾಗಿದೆ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ವರ್ಷಂಪ್ರತಿ ಸಾವಿರಾರು ರೈತರಿಗೆ ಬೆಳೆ ವಿಮೆ ಪರಿಹಾರ ಮೊತ್ತ ಬಿಡುಗಡೆಯಾಗುತ್ತಿದ್ದು , 2024-25 ನೇ ಸಾಲಿನಲ್ಲಿ ಮುಂಗಾರು ಹಂಗಾಮಿಗೆ ಸದ್ರಿ ಯೋಜನೆಯನ್ನು  ಶೀಘ್ರವಾಗಿ ಅನುಷ್ಟಾನಗೊಳಿಸಿ, ಯೋಜನೆಯಲ್ಲಿ ರೈತರಿಗೆ ನೋಂದಣೆ ಮಾಡಲು 60 ದಿನಗಳ ಕಾಲಾವಕಾಶ ನೀಡಬೇಕಾಗುತ್ತದೆ. ಇದರಿಂದಾಗಿ ಸ್ಥಳೀಯ ಪ್ರಾಥಮಿಕ ಸಹಕಾರ ಸಂಘಗಳಿಗೆ ಹೆಚ್ಚಿನ ರೈತರನ್ನು ಈ ಯೋಜನೆಗೆ ಒಳಪಡಿಸಲು ಅನೂಕೂಲವಾಗುತ್ತದೆ ಎಂದವರು ಮಾಹಿತಿ ನೀಡಿದ್ದಾರೆ.

ಈ ಯೋಜನೆ ಸಂಬಂಧ ರೈತರು  ದಿನಂಪ್ರತಿ ಪ್ರಾಥಮಿಕ ಸಹಕಾರ ಸಂಘಗಳಿಗೆ ಕಛೇರಿಗಳಿಗೆ ಸಂಪರ್ಕಿಸಿ ಯೋಜನೆ ಸಂಬಂಧ ಬೆಳೆ ವಿಮೆ ಕಂತು ಪಾವತಿಸುವ ಬಗ್ಗೆ ವಿಚಾರಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ರೈತ ಪರವಾಗಿರುವ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿ ಅನುಷ್ಠಾನಗೊಳಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನನೀಡಬೇಕಾಗಿ ವಿನಂತಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts