ಬಂಟ್ವಾಳದಲ್ಲಿ ಹೆದ್ದಾರಿ ತಡೆದು ಬಿಜೆಪಿ ಪ್ರತಿಭಟನೆ – ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ವಿರೋಧ

ಪೆಟ್ರೋಲ್ ಡಿಸೇಲ್ ಬೆಲೆಯೇರಿಕೆ ವಿರೋಧಿಸಿ ಬಿಜೆಪಿ ಬಂಟ್ವಾಳ ಘಟಕದ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಗುರುವಾರ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ, ಹೆದ್ದಾರಿ ತಡೆ ನಡೆಯಿತು.

ಶಾಸಕ ರಾಜೇಶ್ ನಾಯ್ಕ್ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಹಿಂದಿನ ಸರಕಾರದ ಅವಧಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು.  ಈಗ ನಾಲ್ಕನೇ ಸ್ಥಾನಕ್ಕೆ ಹಿಂದೆ ಸರಿದಿದೆ. ಕಾಂಗ್ರೆಸ್ ಸರಕಾರ ಗ್ಯಾರಂಟಿ ನೆಪದಲ್ಲಿ ಹಣವನ್ನು ಡೈವರ್ಟ್ ಮಾಡುತ್ತಿದ್ದು ಈ ಹಣ ಎಲ್ಲಿ ಹೋಗುತ್ತಿದೆ ಎನ್ನುವುದೇ ಗೊತ್ತಾಗುತ್ತಿಲ್ಲ. ಅಭಿವೃದ್ದಿಗೆ ಯಾವುದೇ ಅನುದಾನ ಸಿಗುತ್ತಿಲ್ಲ ಎಂದು ಆರೋಪಿಸಿದರು.

ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿ ಬಿಟ್ಟಿ ಭಾಗ್ಯ ಕಾಂಗ್ರೆಸ್ ನಿಂದ ಹುಟ್ಟಿದ ತಳಿ. ಬಿಟ್ಟಿ ಭಾಗ್ಯದಿಂದ ಗರೀಭೀ ಹಠಾವೂ ಆಗಿಲ್ಲ ಗರೀಭಿ ಬಚಾವೋ ಆಗಿದೆ ಎಂದರು  ಬಿಜೆಪಿ ಮಂಡಲ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಪಕ್ಷ ಪ್ರಮುಖರಾದ ಸುಲೋಚನಾ ಭಟ್, ಪೂಜಾ ಪೈ, ರಾಮದಾಸ ಬಂಟ್ವಾಳ, ವಿಕಾಸ್ ಪುತ್ತೂರು, ದೇವಪ್ಪ ಪೂಜಾರಿ, ಸಂದೇಶ ಶೆಟ್ಟಿ ಅರೆಬೆಟ್ಟು, ದೇವದಾಸ ಶೆಟ್ಟಿ, ಮಾಧವ ಮಾವೆ, ಪ್ರೇಮಾನಂದ  ಶೆಟ್ಟಿ, ರವೀಶ್ ಶೆಟ್ಟಿ ಕರ್ಕಳ, ಡೊಂಬಯ ಅರಳ, ಎ. ಗೋವಿಂದ ಪ್ರಭು, ಪುರುಷೋತ್ತಮ ಶೆಟ್ಟಿ ವಾಮದಪದವು, ಸುರೇಶ್ ಕೋಟ್ಯಾನ್, ಪುರುಷೋತ್ತಮ ಸಾಲ್ಯಾನ್ ಶಂಭೂರು, ರವೀಂದ್ರ ಕಂಬಳಿ, ತುಂಗಪ್ಪ ಬಂಗೇರ, ಪ್ರಭಾಕರ ಪ್ರಭು, ಪ್ರಕಾಶ ಅಂಚನ್, ಕೇಶವ ದೈಪಲ, ಆನಂದ ಶಂಭೂರು, ವಿದ್ಯಾವತಿ ಪ್ರಮೋದ್ ಕುಮಾರ್, ಹರ್ಷಿಣಿ ಪುಷ್ಪಾನಂದ, ರಶ್ಮಿತ್ ಶೆಟ್ಟಿ ಕೈತ್ರೋಡಿ, ಶ್ರೀದರ್ ಶೆಟ್ಟಿ ಪುಳಿಂಚ ,ಯಶೋಧರ ಕರ್ಬೆಟ್ಟು, ಚೈತ್ಯನ್ಯ ಗಣೇಶ್ ದಾಸ್, ಜಯಂತಿ, ಹರಿಪ್ರಸಾದ್,  ದಿನೇಶ್ ಭಂಡಾರಿ,  ಪುಷ್ಪರಾಜ್ ಚೌಟ, ಗಣೇಶ್ ರೈ ಮಾಣಿ, ಸತೀಶ್ ಪೂಜಾರಿ, ಮೋನಪ್ಪ ದೇವಸ್ಯ, ರತ್ನಾಕರ್ ಚೌಟ, ತನಿಯಪ್ಪ ಗೌಡ, ರೊನಾಲ್ಡ್ ಡಿಸೋಜ ಬಂಟ್ವಾಳ, ಕಾರ್ತಿಕ್ ಬಲ್ಲಾಳ್, ಅಜಿತ್ ಶೆಟ್ಟಿ, ಕಿಶೋರ್ ಪಲ್ಲಿಪಾಡಿ ಸಂತೋಷ್ ರಾಯಿಬೆಟ್ಟು, ಸಂಜೀವ ಪೂಜಾರಿ ಪಂಜಿಕಲ್ಲು, ವಿಜಯ್ ಅಮ್ಟಾಡಿ, ಸುನಿಲ್ ಕಾಯರ್ ಮಾರ್, ಶುಭಕರ ಶೆಟ್ಟಿ, ಬಾಸ್ಕರ್ ಟೈಲರ್ ಕಾಮಾಜೆ ಮತ್ತಿತರರು ಭಾಗವಹಿಸಿದ್ದರು.‌

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದಲ್ಲಿ ಹೆದ್ದಾರಿ ತಡೆದು ಬಿಜೆಪಿ ಪ್ರತಿಭಟನೆ – ಪೆಟ್ರೋಲ್, ಡೀಸೆಲ್ ದರ ಏರಿಕೆಗೆ ವಿರೋಧ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*