ಪೋಷಕರ ಒಡನಾಟ, ಕುಟುಂಬ ರೂಪದ ಪ್ರೀತಿ ಬಾಂಧವ್ಯ ಮಮತೆ ಇದ್ದರೆ ಮಾತ್ರ ಶಾಲೆಗಳು ಅಭಿವೃದ್ಧಿ: ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ

ಪೋಷಕರ ಒಡನಾಟ, ಕುಟುಂಬ ರೂಪದ ಪ್ರೀತಿ ಬಾಂಧವ್ಯ ಮಮತೆ ಇದ್ದರೆ ಶಾಲೆಗಳು ಯಾವ ರೀತಿ ಅಭಿವೃದ್ಧಿ ಹೊಂದುತ್ತವೆ ಎಂಬುದಕ್ಕೆ ಏಮಾಜೆ ಶಾಲೆ ಮಾದರಿಯಾಗಿದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ ಹೇಳಿದರು. 

ಬಂಟ್ವಾಳ ತಾಲೂಕು ನೆಟ್ಲ ಮೂಡ್ನೂರು ಗ್ರಾಮದ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇಲ್ಲಿ ನೂತನವಾಗಿ ಪ್ರಾರಂಭವಾದ ಪೂರ್ವ ಪ್ರಾಥಮಿಕ ( ಎಲ್ ಕೆ ಜಿ ಮತ್ತು ಯು ಕೆ ಜಿ )ತರಗತಿಯನ್ನು ಉದ್ಘಾಟಿಸಿ, ಶಾಲೆಯಲ್ಲಿ ಅಕ್ಷರ ದಾಸೋಹಕ್ಕೆ ಸಂಬಂಧಪಟ್ಟ ಅಕ್ಷಯಪಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

2024-2025 ನೇ ಸಾಲಿನ ಶಾಲಾ ಮಂತ್ರಿಮಂಡಲಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಅಧಿಕಾರ ಹಸ್ತಾಂತರಿಸಿ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭ ವೇದಿಕೆಯಲ್ಲಿದ್ದ ಗಣ್ಯರು ದಾನಿಗಳು ಕೊಡುಗೆಯಾಗಿ ನೀಡಿದ ಶಾಲಾ ಎಲ್ಲ ಮಕ್ಕಳಿಗೆ ಬರೆಯುವ ಪುಸ್ತಕ, ಶಾಲಾ ಸಮವಸ್ತ್ರ, ಬೆಲ್ಟ್, ಟೈ, ಗುರುತಿನ ಕಾರ್ಡು ಮೊದಲಾದವುಗಳನ್ನು ವಿತರಿಸಿದರು.

ಬೆಳಿಗ್ಗೆ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ಯೋಗ ದಿನ ಆಚರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್ ಶಾಲಾ ಆವರಣದಲ್ಲಿ ಗಿಡವನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಲ್ಲಿಕಾ, ಉಪಾಧ್ಯಕ್ಷರಾದ ಪ್ರಸಾದ್ ಆಚಾರ್ಯ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಮಿತ ಡಿ ಪೂಜಾರಿ, ಸದಸ್ಯರಾದ ಧನಂಜಯ ಗೌಡ, ಶಾಲಾ ಗೌರವಾಧ್ಯಕ್ಷರಾದ ಜಯರಾಮ್ ರೈ, ನಿವೃತ್ತ ಪ್ರಾಂಶುಪಾಲರಾದ ಪ್ರೇಮಲತಾ ರೈ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮುರಳೀಧರ ಶೆಟ್ಟಿ, ಮಕ್ಕಳ ಪೋಷಕರು,ವಿದ್ಯಾಭಿಮಾನಿಗಳು, ವಿದ್ಯಾರ್ಥಿಗಳು,ಶಿಕ್ಷಕರು, ಅಕ್ಷರದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಡಾ ತ್ರಿವೇಣಿ ರಮೇಶ್ ಸ್ವಾಗತಿಸಿ, , ಸಹ ಶಿಕ್ಷಕ ಉದಯ ಚಂದ್ರ ವಂದಿಸಿ, ಗೌರವ ಶಿಕ್ಷಕಿ ಅಕ್ಷತಾ ಕೆ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿ ದೀಕ್ಷಾ ಸಹಕರಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪೋಷಕರ ಒಡನಾಟ, ಕುಟುಂಬ ರೂಪದ ಪ್ರೀತಿ ಬಾಂಧವ್ಯ ಮಮತೆ ಇದ್ದರೆ ಮಾತ್ರ ಶಾಲೆಗಳು ಅಭಿವೃದ್ಧಿ: ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*