ಇಂಧನ ಬೆಲೆ ಏರಿಕೆ ವಿರುದ್ಧ ವಿವಿಧ ವಾಹನ ಚಾಲಕ ಮಾಲಕ ಸಂಘದಿಂದ ಪ್ರತಿಭಟನೆ

ರಾಜ್ಯ ಸರಕಾರ ಇಂಧನ ಬೆಲೆ ಏರಿಕೆಯನ್ನು ಶೀಘ್ರ ಹಿಂಪಡೆಯಬೇಕು ಎಂದು ಆಗ್ರಹಿಸಿ ತಾಲೂಕಿನ ವಿವಿಧ ವಾಹನ ಚಾಲಕ ಮಾಲೀಕರ ಸಂಘ ಜಂಟಿಯಾಗಿ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಸಿತು.

ಜಾಹೀರಾತು

ರಿಕ್ಷಾ ಟೆಂಪೊ ಚಾಲಕ ಮಾಲೀಕರ ಸಂಘದ ಗೌರವಾಧ್ಯಕ್ಷ ರಾಜೇಶ್ ಬೊಳ್ಳುಕಲ್ಲು, ಟೂರಿಸ್ಟ್ ಟೆಂಪೋ ಚಾಲಕ, ಮಾಲಕ ಸಂಘದ ಅಧ್ಯಕ್ಷ ಸದಾನಂದ ಗೌಡ ನಾವೂರ, ಬಿಎಂಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತಕುಮಾರ್ ಮಣಿಹಳ್ಳ, ಕೃಷ್ಣ ಅಲ್ಲಿಪಾದೆ ಪ್ರತಿಭಟನಕಾರರನ್ನು  ಉದ್ದೇಶಿಸಿ ಮಾತನಾಡಿದರು.

ಟೂರಿಸ್ಟ್ ಕಾರು ಚಾಲಕ- ಮಾಲಕರ ಸಂಘ ಬಿ.ಸಿ.ರೋಡು, ಟೂರಿಸ್ಟ್ ವ್ಯಾನ್ ಚಾಲಕ- ಮಾಲಕರ ಸಂಘ, ಬಿಎಂಎಸ್ ರಿಕ್ಷಾ ಚಾಲಕ- ಮಾಲಕರ ಸಂಘ, ಸಣ್ಣ ಮತ್ತು ದೊಡ್ಡ ಗೂಡ್ಸ್ ಟೆಂಪೋ ಹಾಗೂ ಪಿಕಪ್ ಮಾಲಕರ ಸಂಘ, ಸಮಾನ ಬಿಎಂಬಿ ಸಂಘ ಬಿ.ಸಿ.ರೋಡು, ರಿಕ್ಷಾ ಡ್ರೈವರ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಪ್ರತಿಭಟನೆ ನಡೆಯಿತು.

ಜಾಹೀರಾತು

ಉಚಿತ ಭಾಗ್ಯಗಳನ್ನು ನೀಡುವ ನೆಪದಲ್ಲಿ ರಾಜ್ಯ ಸರಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಉಚಿತ ಭಾಗ್ಯಗಳಿಗಾಗಿ ಸಂಪನ್ಮೂಲಗಳನ್ನು ಬರಿದಾಗಿಸಿ ಈಗ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಕಂದಾಯ ಇಲಾಖೆಯಲ್ಲಿ ಎಲ್ಲಾ ಸೇವೆಗಳ ದರ ಏರೊಸಿದೆ. ವಿದ್ಯುತ್ ಇಲಾಖೆ, ಸಾರಿಗೆ ಇಲಾಖೆಯಲ್ಲಿ ಬೆಲೆ ಹೆಚ್ಚಳ ಮಾಡಿದೆ. ಅದೂ ಸಾಲದೆಂಬಂತೆ ಇಂದನ ದರದ ಬೆಲೆಯೇರಿಕೆ ಮಾಡಿ ದುಡಿದು ಜೀವನ ಸಾಗಿಸುವ ವಾಹನ ಚಾಲಕರು ಕಂಗಾಲಾಗಿದ್ದಾರೆ. ವಾಹನಗಳ ತೆರಿಗೆ ಹೆಚ್ಚಳ, ಇನ್ಸೂರೆನ್ಸ್ ಹೆಚ್ಚಳ, ಇಂಧನ ದರ ಏರಿಕೆ ಇವುಗಳಿಂದಾಗಿ ವಾಹನಗಳನ್ನು ಇಟ್ಟುಕೊಳ್ಳುವಂತೆಯೂ ಇಲ್ಲ, ಮಾರಾಟ ಮಾಡುವಂತೆಯೂ ಇಲ್ಲ. ಇದರಿಂದ ಬಡ ಚಾಲಕರು ಅತಂತ್ರರಾಗಿದ್ದಾರೆ . ಆದ್ದರಿಂದ ಸರಕಾರ ಇಂಧನ ದರವನ್ನು ಪೂರ್ಣ ಪ್ರಮಾಣದಲ್ಲಿ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಬಿಎಂಎಸ್ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್, ಟಾಂಟಾಂ ಬಿಎಂಬಿ ಸಂಘದ ಸುರೇಶ್ ಪೂಜಾರಿ, ಟೂರಿಸ್ಟ್ ಕಾರು ಚಾಲಕ ಮತ್ತು ಮಾಲಕರ ಸಂಘದ ಅಧ್ಯಕ್ಷ ರಾಘವೇಂದ್ರ ರಾವ್, ಪಿಕಪ್ ಚಾಲಕ,ಮಾಲಕ ಸಂಘದ ಅಧ್ಯಕ್ಷ ನಾರಾಯಣ  ನಾಯ್ಕ್, ಪ್ರಭಾಕರ ದೈವಗುಡ್ಡೆ, ಪದಾಧಿಕಾರಿಗಳಾದ ಕೃಷ್ಣಅಲ್ಲಿಪಾದೆ, ನಾರಾಯಣ, ಪ್ರಕಾಶ್, ಶ್ರೀಕಾಂತ್ ಪಾಣೆಮಂಗಳೂರು, ಹರೀಶ್ ಮತ್ತಿತರರಿದ್ದರು. ಬಳಿಕ ತಾಲೂಕಾಡಳಿತ ಕಚೇರಿಯ ವರೆಗೆ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ  ಬಂದ ಪ್ರತಿಭಟನಕಾರರು ತಹಸೀಲ್ದಾರರ ಮೂಲಕ ಸರಕಾರಕ್ಕೆ‌ಮನವಿ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಇಂಧನ ಬೆಲೆ ಏರಿಕೆ ವಿರುದ್ಧ ವಿವಿಧ ವಾಹನ ಚಾಲಕ ಮಾಲಕ ಸಂಘದಿಂದ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*