ಬಂಟ್ವಾಳ

ಇಂಧನ ಬೆಲೆ ಏರಿಕೆ ವಿರುದ್ಧ ವಿವಿಧ ವಾಹನ ಚಾಲಕ ಮಾಲಕ ಸಂಘದಿಂದ ಪ್ರತಿಭಟನೆ

ರಾಜ್ಯ ಸರಕಾರ ಇಂಧನ ಬೆಲೆ ಏರಿಕೆಯನ್ನು ಶೀಘ್ರ ಹಿಂಪಡೆಯಬೇಕು ಎಂದು ಆಗ್ರಹಿಸಿ ತಾಲೂಕಿನ ವಿವಿಧ ವಾಹನ ಚಾಲಕ ಮಾಲೀಕರ ಸಂಘ ಜಂಟಿಯಾಗಿ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ ನಡೆಸಿತು.

ಜಾಹೀರಾತು

ರಿಕ್ಷಾ ಟೆಂಪೊ ಚಾಲಕ ಮಾಲೀಕರ ಸಂಘದ ಗೌರವಾಧ್ಯಕ್ಷ ರಾಜೇಶ್ ಬೊಳ್ಳುಕಲ್ಲು, ಟೂರಿಸ್ಟ್ ಟೆಂಪೋ ಚಾಲಕ, ಮಾಲಕ ಸಂಘದ ಅಧ್ಯಕ್ಷ ಸದಾನಂದ ಗೌಡ ನಾವೂರ, ಬಿಎಂಎಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತಕುಮಾರ್ ಮಣಿಹಳ್ಳ, ಕೃಷ್ಣ ಅಲ್ಲಿಪಾದೆ ಪ್ರತಿಭಟನಕಾರರನ್ನು  ಉದ್ದೇಶಿಸಿ ಮಾತನಾಡಿದರು.

ಟೂರಿಸ್ಟ್ ಕಾರು ಚಾಲಕ- ಮಾಲಕರ ಸಂಘ ಬಿ.ಸಿ.ರೋಡು, ಟೂರಿಸ್ಟ್ ವ್ಯಾನ್ ಚಾಲಕ- ಮಾಲಕರ ಸಂಘ, ಬಿಎಂಎಸ್ ರಿಕ್ಷಾ ಚಾಲಕ- ಮಾಲಕರ ಸಂಘ, ಸಣ್ಣ ಮತ್ತು ದೊಡ್ಡ ಗೂಡ್ಸ್ ಟೆಂಪೋ ಹಾಗೂ ಪಿಕಪ್ ಮಾಲಕರ ಸಂಘ, ಸಮಾನ ಬಿಎಂಬಿ ಸಂಘ ಬಿ.ಸಿ.ರೋಡು, ರಿಕ್ಷಾ ಡ್ರೈವರ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಪ್ರತಿಭಟನೆ ನಡೆಯಿತು.

ಉಚಿತ ಭಾಗ್ಯಗಳನ್ನು ನೀಡುವ ನೆಪದಲ್ಲಿ ರಾಜ್ಯ ಸರಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಉಚಿತ ಭಾಗ್ಯಗಳಿಗಾಗಿ ಸಂಪನ್ಮೂಲಗಳನ್ನು ಬರಿದಾಗಿಸಿ ಈಗ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಕಂದಾಯ ಇಲಾಖೆಯಲ್ಲಿ ಎಲ್ಲಾ ಸೇವೆಗಳ ದರ ಏರೊಸಿದೆ. ವಿದ್ಯುತ್ ಇಲಾಖೆ, ಸಾರಿಗೆ ಇಲಾಖೆಯಲ್ಲಿ ಬೆಲೆ ಹೆಚ್ಚಳ ಮಾಡಿದೆ. ಅದೂ ಸಾಲದೆಂಬಂತೆ ಇಂದನ ದರದ ಬೆಲೆಯೇರಿಕೆ ಮಾಡಿ ದುಡಿದು ಜೀವನ ಸಾಗಿಸುವ ವಾಹನ ಚಾಲಕರು ಕಂಗಾಲಾಗಿದ್ದಾರೆ. ವಾಹನಗಳ ತೆರಿಗೆ ಹೆಚ್ಚಳ, ಇನ್ಸೂರೆನ್ಸ್ ಹೆಚ್ಚಳ, ಇಂಧನ ದರ ಏರಿಕೆ ಇವುಗಳಿಂದಾಗಿ ವಾಹನಗಳನ್ನು ಇಟ್ಟುಕೊಳ್ಳುವಂತೆಯೂ ಇಲ್ಲ, ಮಾರಾಟ ಮಾಡುವಂತೆಯೂ ಇಲ್ಲ. ಇದರಿಂದ ಬಡ ಚಾಲಕರು ಅತಂತ್ರರಾಗಿದ್ದಾರೆ . ಆದ್ದರಿಂದ ಸರಕಾರ ಇಂಧನ ದರವನ್ನು ಪೂರ್ಣ ಪ್ರಮಾಣದಲ್ಲಿ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಬಿಎಂಎಸ್ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್, ಟಾಂಟಾಂ ಬಿಎಂಬಿ ಸಂಘದ ಸುರೇಶ್ ಪೂಜಾರಿ, ಟೂರಿಸ್ಟ್ ಕಾರು ಚಾಲಕ ಮತ್ತು ಮಾಲಕರ ಸಂಘದ ಅಧ್ಯಕ್ಷ ರಾಘವೇಂದ್ರ ರಾವ್, ಪಿಕಪ್ ಚಾಲಕ,ಮಾಲಕ ಸಂಘದ ಅಧ್ಯಕ್ಷ ನಾರಾಯಣ  ನಾಯ್ಕ್, ಪ್ರಭಾಕರ ದೈವಗುಡ್ಡೆ, ಪದಾಧಿಕಾರಿಗಳಾದ ಕೃಷ್ಣಅಲ್ಲಿಪಾದೆ, ನಾರಾಯಣ, ಪ್ರಕಾಶ್, ಶ್ರೀಕಾಂತ್ ಪಾಣೆಮಂಗಳೂರು, ಹರೀಶ್ ಮತ್ತಿತರರಿದ್ದರು. ಬಳಿಕ ತಾಲೂಕಾಡಳಿತ ಕಚೇರಿಯ ವರೆಗೆ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ  ಬಂದ ಪ್ರತಿಭಟನಕಾರರು ತಹಸೀಲ್ದಾರರ ಮೂಲಕ ಸರಕಾರಕ್ಕೆ‌ಮನವಿ ಸಲ್ಲಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

11 hours ago