ನಮ್ಮೂರು

KALLADKA – ಕಲ್ಲಡ್ಕದಲ್ಲಿ ಮಳೆಗೆ ಹೆದ್ದಾರಿಯಲ್ಲಿ ಪ್ರವಾಹ

ಜಾಹೀರಾತು

ಭಾನುವಾರ ಮಧ್ಯಾಹ್ನದ ಬಳಿಕ ಬಂಟ್ವಾಳದ ಹಲವೆಡೆ ಭಾರಿ ಮಳೆಯಾಗಿದ್ದು, ಕಲ್ಲಡ್ಕದಲ್ಲಂತೂ ಕಾಮಗಾರಿ ನಡೆಯುವ ಪ್ರದೇಶದಲ್ಲಿ ಹೆದ್ದಾರಿ ಅಕ್ಷರಶಃ ಹೊಳೆಯಂತಾಯಿತು. ಯಾವುದು ಗುಂಡಿ, ಯಾವುದು ರಸ್ತೆ ಎಂದು ಗುರುತೇ ಸಿಗದಂತೆ ಫ್ಲೈಓವರ್ ಕಾಮಗಾರಿ ನಡೆಯುವ ಪ್ರದೇಶಗಳ ಸಮೀಪವೆಲ್ಲಾ ನದಿಯಂತೆ ನೀರು ಹರಿಯಿತು. ಇದರ ವಿಡಿಯೋಗಳೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದವು.ಯಾಕೆಹೀಗಾಯಿತು?-ಮುಂದೆಓದಿರಿ

ಸಮರ್ಪಕವಾಗಿ ನೀರು ಹರಿದುಹೋಗುವ ತಾತ್ಕಾಲಿಕ ವ್ಯವಸ್ಥೆಯನ್ನಾದರೂ ಮಾಡದೇ ಇದ್ದರೆ, ಕಲ್ಲಡ್ಕದಲ್ಲಿ ಮಳೆ ಬಂದಾಗ ಹೊಳೆಯಂಥ ವಾತಾವರಣ ಉಂಟಾಗುತ್ತದೆ ಎಂಬ ಭೀತಿಯನ್ನು ಮಳೆಗಾಲದ ಮೊದಲೇ ಎಲ್ಲರೂ ವ್ಯಕ್ತಪಡಿಸಿದ್ದರು. ಮಾಧ್ಯಮಗಳಲ್ಲೂ ಇದು ವರದಿಯಾಗಿದ್ದವು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕೂಡಲೇ ರಸ್ತೆ ದುರಸ್ತಿ ಮಾಡಬೇಕು ಎಂದು ಸೂಚಿಸಿದ್ದರೆ, ಇತ್ತೀಚೆಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರೂ ಇದನ್ನು ಪುನರುಚ್ಛರಿಸಿದ್ದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಲ್ಲಡ್ಕದಲ್ಲಿ ಸಂಚರಿಸಿ, ಪರಿಸ್ಥಿತಿ ಅವಲೋಕಿಸಿ ರಸ್ತೆ ದುರಸ್ತಿಗೆ ಹಾಗೂ ನೀರು ಹರಿದುಹೋಗುವ ಕುರಿತು ವ್ಯವಸ್ಥೆ ಕಲ್ಪಿಸುವಂತೆ ಹೆದ್ದಾರಿ ಅಧಿಕಾರಿಗಳಿಗೆ ಹೇಳಿದ್ದರು. ಆದರೆ ಮುಂದೇನಾಗಿದೆ… ಪ್ರತ್ಯಕ್ಷ ನೋಡಿ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ