ಹಳ್ಳಿಗಳಲ್ಲಿ ಕಳ್ಳತನ: ಭಜನಾ ಮಂದಿರ, ದೈವದೇವರ ಗುಡಿಯ ಕಾಣಿಕೆಡಬ್ಬಿ ಟಾರ್ಗೆಟ್

ಜಾಹೀರಾತು

ಮಳೆ ಆರಂಭಗೊಂಡ ಬಳಿಕ ಕಳ್ಳರ ಚಿತ್ತ ಹಳ್ಳಿಯತ್ತ ನೆಟ್ಟಿದೆ. ಅಲ್ಲಿರುವ ಭಜನಾ ಮಂದಿರ, ದೈವದೇವರ ಗುಡಿಗಳನ್ನೂ ಬಿಟ್ಟಿಲ್ಲ. ಕಾಣಿಕೆಡಬ್ಬಿಯಲ್ಲಿರುವ ಸಣ್ಣ ಪುಟ್ಟ ಹಣವನ್ನೂ ಎಗರಿಸಿರುವ ಪ್ರಕರಣಗಳು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದಲ್ಲಿರುವ ಪೊಯಿತಾಜೆ ಏರಮಲೆ ಶ್ರೀ ಕೋದಂಡ ರಾಮ ಭಜನಾ ಮಂದಿರದ ಮುಂಬಾಗಿಲು ಮುರಿದು ಮಂದಿರದೊಳಗೆ ಇದ್ದ ಕಾಣಿಕೆ ಡಬ್ಬಿಯಲ್ಲಿದ್ದ ಸುಮಾರು 3000 ಸಾವಿರ ರೂ ನಗದನ್ನು ಕಳವು ಮಾಡಲಾಗಿದೆ. ಕಪಾಟಿನ ಬಾಗಿಲು ಮುರಿದು ಅದರೊಳಗೆ ಇದ್ದ ಅಗತ್ಯವಾದ ಪತ್ರಗಳನ್ನು ಚೆಲ್ಲಾಪಿಲ್ಲಿಯಾಗಿ ಮಾಡಿ ಹೋಗಿದ್ದಾರೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಪ್ಪಳಕೋಡಿ ಎಂಬಲ್ಲಿರುವ ಶಿಶು ಮಂದಿರದೊಳಗೆ ನುಗ್ಗಿದ ಕಳ್ಳರು ಅದರಲ್ಲಿದ್ದ ಡಬ್ಬಿಯನ್ನು ಮುರಿದು ಸುಮಾರು 600 ರೂ ನಗದನ್ನು ದೋಚಿದ್ದಾರೆ. ನರಿಕೊಂಬು ಗ್ರಾಮದ ಅಂತರ ಎಂಬಲ್ಲಿರುವ ಸಾಲ್ಯಾನ್ ಕುಟುಂಬದ ತರವಾಡು ದೇವಸ್ಥಾನ ಇದ್ದು ಅದರ ಬಾಗಿಲು ಮುರಿದು ಒಳಪ್ರವೇಶ ಮಾಡಿದ ಕಳ್ಳರು ಕಾಣಿಕೆ ಡಬ್ಬಿ ಪುಡಿಗೈದು ಅದರಲ್ಲಿದ್ದ ಸುಮಾರು 1000 ಸಾವಿರ ನಗದು ಕಳವು ಮಾಡಿದ್ದಾರೆ.

ಬಾಳ್ತಿಲ ಗ್ರಾಮದ ಸುಧೆಕ್ಕಾರು ಎಂಬಲ್ಲಿರುವ ರಕ್ತೇಶ್ವರಿ ಗುಳಿಗ ನ ಗರ್ಭಗುಡಿಯ ಬಾಗಿಲ ಚಿಲಕ ಮುರಿದು ಒಳಗೆ ಪ್ರವೇಶ ಮಾಡಿದ ಕಳ್ಳರು ಗರ್ಭಗುಡಿಯೊಳಗಿನ ವಸ್ತುಗಳನ್ನು ‌ಚೆಲ್ಲಾಪಿಲ್ಲಿ ಮಾಡಿದ್ದಲ್ಲದೆ, ಕಾಣಿಕೆ ಡಬ್ಬಿ ಒಡೆದು ಹಾಕಿ ಅದರಲ್ಲಿದ್ದ ಹಣ ಮತ್ತು ಭಜನೆಯಿಂದ ಹೊಂದಾಣಿಕೆ ಗೊಂಡ ಒಟ್ಟು 10,000 ನಗದನ್ನು ಕಳ್ಳರು ಎಗರಿಸಿದ್ದಾರೆ. ಈ ಪ್ರಕರಣಗಳೆಲ್ಲವೂ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಇದೀಗ ತನಿಖೆ ಸಾಗಿದೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಹಳ್ಳಿಗಳಲ್ಲಿ ಕಳ್ಳತನ: ಭಜನಾ ಮಂದಿರ, ದೈವದೇವರ ಗುಡಿಯ ಕಾಣಿಕೆಡಬ್ಬಿ ಟಾರ್ಗೆಟ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*