ಮಜಿ ವೀರಕಂಭ ಶಾಲೆಯ ಶಿಕ್ಷಕ ರಕ್ಷಕ ಸಭೆ

ಸರ್ವಧರ್ಮಿಯ ಮಕ್ಕಳು ಒಂದೇ ಕಡೆ ಸೇರಿ ಸಮಾನತೆಯನ್ನು ಮೆರೆಯಲು ಶಾಲೆಗಳೇ ಮುಖ್ಯ ಅವಕಾಶವನ್ನು ಕಲ್ಪಿಸುತ್ತದೆ ಎಂದು ಬಂಟ್ವಾಳ ತಾಲೂಕಿನ ಮಜಿ ವೀರಕಂಬ ಶಾಲೆಯ ದತ್ತು ಸಂಸ್ಥೆಯ ಮುಖ್ಯಸ್ಥ ಶ್ರೀಮಾತಾ ಡೆವಲಪರ್ಸ್ ಸುರತ್ಕಲ್ ನ ಮ್ಯಾನೇಜಿಂಗ್  ಡೈರೆಕ್ಟರ್ ಸಂತೋಷ್ ಕುಮಾರ್ ಶೆಟ್ಟಿ  ಹೇಳಿದರು.

ಜಾಹೀರಾತು

ಅವರು ಶಾಲೆಯಲ್ಲಿ ನಡೆದ 2024 25 ನೇ ಸಾಲಿನ ಶಿಕ್ಷಕ ರಕ್ಷಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಪೋಷಕರು ವಿದ್ಯಾರ್ಥಿಗಳ ದಿನನಿತ್ಯದ ಕಲಿಕೆ ವಿಮರ್ಶಿಸಿ ಮುತುವರ್ಜಿಯಿಂದ ಗಮನ ಹರಿಸಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ರೇಣುಕಾ ಕಣಿಯೂರು ಮಾರ್ಗದರ್ಶನ ನೀಢಿದರು.

ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಈಶ್ವರ ಭಟ್ ರಾಕೋಡಿ ಮಾತನಾಡಿ, ಹಳೆ ವಿದ್ಯಾರ್ಥಿಗಳು ಶಾಲೆಯೊಂದಿಗೆ ಉತ್ತಮ ಬಾಂಧವ್ಯವನ್ನು ಇರಿಸಿಕೊಳ್ಳಬೇಕು ಎಂದರು.ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾದ ರಾಮ್ ಪ್ರಸಾದ್ ಕೊಂಬಿಲ ಶುಭ ಹಾರೈಸಿದರು.

ಜಾಹೀರಾತು

ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಇವರು ಅಧ್ಯಕ್ಷತೆ ವಹಿಸಿದ್ದರು. ವಿಟ್ಲ ಗ್ರಾಮೀಣ ಬ್ಯಾಂಕ್ ನೀಡಿದ ಮೈಕ್ ಅನ್ನು ಬ್ಯಾಂಕಿನ ನಿರ್ದೇಶಕರಾದ ವಿಶ್ವನಾಥ ಎಂ ಹಸ್ತಾಂತರಿಸಿದರು.  ವೀರಕಂಬ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ, ಎಸ್‌ಡಿಎಂಸಿ ಸದಸ್ಯರು, ಶಾಲಾ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಅನುಷಾ ಸ್ವಾಗತಿಸಿದರು.

ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಆಗ್ನೇಸ್ ಮಂಡೋನ್ಸಾ ಪ್ರಾಸ್ತಾವಿಕ ಮಾತುಗಳನ್ನಾನಡಿದರು. ಶಿಕ್ಷಕಿ ಮಮತಾ ದಾನಿಗಳ ಪಟ್ಟಿ ವಾಚಿಸಿ,ಶಿಕ್ಷಕಿ ಸಂಗೀತ ಶರ್ಮಾ ಕಾರ್ಯಕ್ರಮ ನಿರ್ವಹಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಜಿ ವೀರಕಂಭ ಶಾಲೆಯ ಶಿಕ್ಷಕ ರಕ್ಷಕ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*