ಪ್ರಾಕೃತಿಕ ವಿಕೋಪದ ಸ್ಥಳ ಪರಿಶೀಲನೆ, ಮುನ್ನೆಚ್ಚರಿಕೆಗೆ ಕ್ರಮ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಜಾಹೀರಾತು

ಪ್ರಾಕೃತಿಕ ವಿಕೋಪ ಉಂಟಾಗಬಹುದಾದ ಪ್ರದೇಶ ಹಾಗೂ ನೆರೆಯಿಂದ ತೊಂದರೆಗೊಳಗಾಗುವ ಪ್ರದೇಶಗಳನ್ನು ಪರಿಶೀಲಿಸಿ ಅಧಿಕಾರಿಗಳ ತಂಡದ ಜತೆ ಈ ಕುರಿತು ಮುನ್ನೆಚ್ಚರಿಕಾ ಕ್ರಮಗಳ ಮಾಹಿತಿ ಪಡೆದುಕೊಳ್ಳುವ ಕಾರ್ಯದ ಅಂಗವಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬಂಟ್ವಾಳಕ್ಕೆ ಆಗಮಿಸಿದರು.

ಪಾಣೆಮಂಗಳೂರಿನಲ್ಲಿ ನೀರಿನ ಟ್ಯಾಂಕಿಗೆ ಅಪಾಯ ಇರುವ ಪ್ರದೇಶ, ಗೂಡಿನಬಳಿಯಲ್ಲಿನ ಸಮಸ್ಯೆಯನ್ನು ವೀಕ್ಷಿಸಿದರು. ಗೂಡಿನಬಳಿ ಪ್ರದೇಶದಲ್ಲಿ ಉಂಟಾಗಿರುವ ಕುಸಿತಕ್ಕೆ ಸಂಬಂಧಿಸಿ ತಡೆಗೋಡೆ ನಿರ್ಮಿಸಲಾಗಿದ್ದು, ಅಲ್ಲಿ ಹೆಚ್ಚುವರಿ ತಡೆಗೋಡೆಯ ಜತೆಗೆ ನೀರು ಹರಿದು ಹೋಗುವುದಕ್ಕೂ ವ್ಯವಸ್ಥೆ ಆಗಬೇಕಿದೆ. ಜತೆಗೆ ಪಾಣೆಮಂಗಳೂರಿನಲ್ಲಿ ಗುಡ್ಡ ಅಗೆತದಿಂದ ತಡೆಗೋಡೆ ನಿರ್ಮಾಣವಾದರೂ ಪುರಸಭೆಯ ಟ್ಯಾಂಕ್ ಅಪಾಯದಲ್ಲಿದ್ದು ಅದಕ್ಕೂ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಜಿಲ್ಲಾಧಿಕಾರಿ ಈ ಸಂದರ್ಭ ಸುದ್ದಿಗಾರರಿಗೆ ತಿಳಿಸಿದರು. ಬಳಿಕ ಡಿಸಿ ಕಲ್ಲಡ್ಕ, ಮಾಣಿ, ಪೆರ್ನೆಯಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಯನ್ನು ವೀಕ್ಷಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್‌ಕುಮಾರ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಶುಶಾಂತ್, ಮಂಗಳೂರು ಸಹಾಯಕ ಕಮೀಷನರ್ ಹರ್ಷವರ್ಧನ ಪಿ.ಜೆ., ತಹಸೀಲ್ದಾರ್ ಡಿ.ಅರ್ಚನಾ ಭಟ್, ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಆರೋಗ್ಯ ನಿರೀಕ್ಷಕ ರತ್ನಪ್ರಸಾದ್, ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೊ, ತಾಲೂಕು ಕಚೇರಿಯ ಕಂದಾಯ ನಿರೀಕ್ಷಕರಾದ ಜನಾರ್ದನ್ ಜೆ, ವಿಜಯ್ ಆರ್, ಪುರಸಭಾ ಸಮುದಾಯ ಸಂಘಟಕಿ ಉಮಾವತಿ ಉಪಸ್ಥಿತರಿದ್ದರು.

ಮಾಣಿಯಲ್ಲಿ ಚರಂಡಿ ವ್ಯವಸ್ಥೆ, ಮನೆ ಅಪಾಯದಲ್ಲಿರುವುದನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ

 ಮಾಣಿ ಗ್ರಾಮದ ಹಳೀರ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಅಪಾಯದ ಅಂಚಿಗೆ ತಲುಪಿದ ವಾಸ್ತವ್ಯದ ಮನೆ ಮತ್ತು ಮಾಣಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಕಾಮಗಾರಿ ಮತ್ತು ಮಳೆ ನೀರು ಹರಿದುಹೋಗಲು ಸಮಸ್ಯೆ ಇರುವ ಚರಂಡಿ ವ್ಯವಸ್ಥೆಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶುಕ್ರವಾರ ಪರಿಶೀಲನೆ ನಡೆಸಿದರು. ಇದೇ ವೇಳೆ ಪೆರ್ನೆ ಗ್ರಾಮದಲ್ಲಿ  ದೋರ್ಮೆಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ  ನೀರು ಹರಿದುಹೋಗಲು ಸಮಸ್ಯೆಯಾಗಿ ಕೃಷಿ ಭೂಮಿಗೆ ಹಾನಿಯಾದ ಬಗ್ಗೆ  ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಶೀಲನೆ ನಡೆಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪ್ರಾಕೃತಿಕ ವಿಕೋಪದ ಸ್ಥಳ ಪರಿಶೀಲನೆ, ಮುನ್ನೆಚ್ಚರಿಕೆಗೆ ಕ್ರಮ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*