ಬುಧವಾರ ಸುರಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆ ಹಾನಿಗಳು ಸಂಭವಿಸಿವೆ ಎಂದು ತಾಲೂಕು ಕಚೇರಿ ಸಂಜೆ ನೀಡಿದ ಮಾಹಿತಿಯಲ್ಲಿ ತಿಳಿಸಿದೆ.
ಸಂಗಬೆಟ್ಟು ಗ್ರಾಮದ ಸಿದ್ಧಕಟ್ಟೆ ಕೇಂದ್ರ ಮೈದಾನ ಬಳಿ ನಿವಾಸಿ ಮೋಹಿನಿ ಅವರ ಮನೆಗೆ ಮರ ಬಿದ್ದು ಹಾನಿಯಾಗಿದೆ. ಯಾವುದೇ ಜೀವ ಹಾನಿಯಾಗಿರುವುದಿಲ್ಲ. ಇರ್ವತ್ತುರು ಗ್ರಾಮದ ಸುಮಿತ್ರ ಅವರ ಮನೆಗೆ ತೆಂಗಿನ ಮರ ಬಿದ್ದು ಭಾಗಶ ಹಾನಿಯಾಗಿರುತ್ತದೆ. ಕುರಿಯಾಳ ಕೊಪ್ಪಳ ಮನೆಯ ಮಾರ್ಸೆಲ್ ಬೆನಡಿಕ್ಟ್ ಲೋಬೊ ಮನೆಗೆ ತೀವ್ರ ಹಾನಿ ಆಗಿರುತ್ತದೆ. ಕುರಿಯಾಳದ ಜಗದೀಶ್ ರೈ ಮನೆ ಹಿಂಬದಿ ಬರೆ ಕುಸಿದಿರುತ್ತದೆ. ಬಾಳ್ತಿಲ ಗ್ರಾಮದ ಕಮಲ ನಾಯ್ಕ ಎಂಬವರ ಮನೆಯ ಮೇಲೆ ಮರ ಬಿದ್ದು ಮನೆಯ ಒಂದು ಬದಿಗೆ ತೀವ್ರ ಹಾನಿಯಾಗಿರುತ್ತದೆ. ಯಾವುದೇ ಜೀವ ಹಾನಿಯಾಗಿರುವುದಿಲ್ಲ ಎಂದು ಮಾಹಿತಿ ನೀಡಲಾಗಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…