ಬಂಟ್ವಾಳ

ರೋಟರಿ ಕ್ಲಬ್ ಬಂಟ್ವಾಳ ಹೊಸ ತಂಡ ಜುಲೈ 6ರಂದು ಪದಗ್ರಹಣ

ಜಾಹೀರಾತು

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ ನೂತನ ತಂಡ ಜುಲೈ 6ರಂದು ಬಿ.ಸಿ.ರೋಡಿನ ರೋಟರಿ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಲಿದೆ. ಈ ವಿಷಯವನ್ನು ನಿಯೋಜಿತ ಅಧ್ಯಕ್ಷ ಬೇಬಿ ಕುಂದರ್ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರೀಟರಿ ಜಿಲ್ಲೆಯ ಜಿಲ್ಲಾ ಗವರ್ನರ್ ಅವರ ಸಲಹೆಗಾರರಾದ ಬಿ.ಶೇಖರ ಶೆಟ್ಟಿ ಅವರು ನೂತನ ತಂಡಕ್ಕೆ ಪ್ರಮಾಣವಚನ ಬೋಧಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ.ರಮಾನಾಥ ರೈ, ವಲಯ 4ರ ಸಹಾಯಕ ಗವರ್ನರ್ ಮಹಮ್ಮದ್ ವಳವೂರು, ವಲಯ ಸೇನಾನಿ ಪುಷ್ಪರಾಜ್ ಹೆಗ್ಡೆ ಭಾಗವಹಿಸಲಿದ್ದಾರೆ. ಈ ಸಂದರ್ಭ ಉಪ್ಪುಗುಡ್ಡೆ ಅಂಗನವಾಡಿ ಕೇಂದ್ರಕ್ಕೆ ಅಲ್ಮೇರಾ ಮತ್ತು ಡೆಸ್ಕ್, ಅಜ್ಜಿಬೆಟ್ಟು ಪರಿಸರದ ಬಾಲಕನ ಚಿಕಿತ್ಸೆಗೆ ನೆರವು, ಗೂಡಿನಬಳಿ ನೇತ್ರಾವತಿ ನದಿಯ ರಕ್ಷಕ ತಂಡಕ್ಕೆ ಗೌರವಾರ್ಪಣೆ ನಡೆಯಲಿದೆ ಎಂದು ಬೇಬಿ ಕುಂದರ್ ಹೇಳಿದರು.
ಈ ವರ್ಷದ ಜಿಲ್ಲಾ ಗವರ್ನರ್ ವಿಕ್ರಮ್ ದತ್ತ ನೇತೃತ್ವದ ಒಂಭತ್ತು ಜಿಲ್ಲಾ ಯೋಜನೆಗಳ ಜಾರಿ ಮಾಡುವುದರ ಜೊತೆಗೆ ಬಂಟ್ವಾಳ ಘಟಕದಿಂದಲೂ ಪ್ರಮುಖ ಯೋಜನೆಯನ್ನು ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು. ಈ ಸಂದರ್ಭ ರೋಟರಿ ಜಿಲ್ಲೆಯ ಆಡಳಿತ ವಿಭಾಗದ ಜಿಲ್ಲಾ ಕಾರ್ಯದರ್ಶಿ ರಿತೇಶ್ ಬಾಳಿಗಾ, ನಿಯೋಜಿತ ಕಾರ್ಯದರ್ಶಿ ಚಂದ್ರಹಾಸ ಗಾಂಭೀರ, ನಿಯೋಜಿತ ಖಜಾಂಚಿ ಶಾಂತರಾಜ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts