ವಾಟ್ಸಾಪ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿದ ಕೊಕ್ಕಡ ನಿವಾಸಿಯೋರ್ವರು 1 ಲಕ್ಷ ರೂ ಕಳೆದುಕೊಂಡ ಘಟನೆ ನಡೆದಿದ್ದು, ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ಶ್ರೀನಾಥ ಬಿ (29) ತನ್ನ ಮನೆಯಲ್ಲಿರುವಾಗ, ವಾಟ್ಸಾಪ್ ಗೆ ಅವರ ಬ್ಯಾಂಕಿಗೆ ಸಂಬಂಧಿಸಿರುವಂತೆ ಕಾಣಲ್ಪಡುವ ಮೆಸೆಜ್ ಬಂದಿರುತ್ತದೆ. ಮೆಸೇಜ್ ನಲ್ಲಿದ್ದ ಲಿಂಕ್ ನ್ನು ಓಪನ್ ಮಾಡಿದ ತಕ್ಷಣ ವಾಟ್ಸಾಪ್ ಬ್ಲಾಕ್ ಆಗಿರುತ್ತದೆ. ಬಳಿಕ ಯಾವುದೇ ಓಟಿಪಿ ನೀಡದಿದ್ದರೂ, ಬ್ಯಾಂಕ್ ಖಾತೆಯಿಂದ ಒಂದು ಲಕ್ಷ ರೂ ಹಣವನ್ನು ಅಪರಿಚಿತ ವ್ಯಕ್ತಿ ವರ್ಗಾಯಿಸಿಕೊಂಡು ವಂಚನೆ ಮಾಡಿರುತ್ತಾನೆ ಎಂದವರು ದೂರು ನೀಡಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 53/2024 ಕಲಂ: 417,419 IPC 66 (c) 66( D) IT ACT ರಂತೆ ಪ್ರಕರಣ ದಾಖಲಾಗಿರುತ್ತದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವಾಟ್ಸಾಪ್ ಬಂದ ಲಿಂಕ್ ಕ್ಲಿಕ್ ಮಾಡಿ ಲಕ್ಷ ರೂ ಕಳೆದುಕೊಂಡ ಕೊಕ್ಕಡ ನಿವಾಸಿ"
Be the first to comment on "ವಾಟ್ಸಾಪ್ ಬಂದ ಲಿಂಕ್ ಕ್ಲಿಕ್ ಮಾಡಿ ಲಕ್ಷ ರೂ ಕಳೆದುಕೊಂಡ ಕೊಕ್ಕಡ ನಿವಾಸಿ"