ಆ.3ರಂದು ಭ್ರಾಮರಿ ಯಕ್ಷವೈಭವ; ಆಮಂತ್ರಣ ಪತ್ರಿಕೆ ಬಿಡುಗಡೆ, ವಿವರಗಳು ಇಲ್ಲಿವೆ

ಯಕ್ಷಗಾನ ಎಂಬುದು ಕೇವಲ ಒಂದು ಕಲೆಯಲ್ಲ. ಅದು ಪೂಜೆಗೆ ಸಮಾನಾದ ಸೇವೆ.vಯಕ್ಷಗಾನದ ಸೇವೆ ಮಾಡುವವರಿಗೆ ಸದಾ ದೇವತಾನುಗ್ರಹ ಪ್ರಾಪ್ತವಾಗುತ್ತದೆ ಎಂದು ಉದ್ಯಮಿ ಬಿ. ಶಿವಪ್ರಸಾದ್ ಪ್ರಭು ಅಭಿಪ್ರಾಯ ಪಟ್ಟರು.

ಮಂಗಳೂರಿನಲ್ಲಿ ಭ್ರಾಮರೀ ಯಕ್ಷಮಿತ್ರರು ಟ್ರಸ್ಟ್ ಸಂಯೋಜನೆಯಲ್ಲಿ ಆಗಸ್ಟ್ 3 ರಂದು ಪುರಭವನದಲ್ಲಿ ಜರಗಲಿರುವ ಭ್ರಾಮರೀ ಯಕ್ಷವೈಭವ 2024 ರ ಆಮಂತ್ರಣ ಪತ್ರಿಕೆ ಮತ್ತು ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಕಳೆದ ಹಲವು ವರ್ಷಗಳಿಂದ ಮಾದರಿ ಕಾರ್ಯಕ್ರಮ ನೀಡುವ ಮೂಲಕ ಮನೆಮಾತಾಗಿದೆ ಎಂದರು.
ಟ್ರಸ್ಟಿನ ಅಧ್ಯಕ್ಷ ವಿನಯಕೃಷ್ಣ ಕುರ್ನಾಡು ಅವರು ಮಾತನಾಡಿ ಆ. 3 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ 4 ರಿಂದ ಮರುದಿನ ಮುಂಜಾನೆಯವರೆಗೆ ಯಕ್ಷಗಾನ ಜರಗಲಿದೆ. ಸಂಜೆ 4 ರಿಂದ ಯಕ್ಷಛಾಯಾಚಿತ್ರ ಸಂಗ್ರಹಕ ಮನೋಹರ ಕುಂದರ್ ಅವರ ಅಪೂರ್ವ ಯಕ್ಷಛಾಯಾಚಿತ್ರ ಪ್ರದರ್ಶನ ಜರಗಲಿದೆ. ಸಂಜೆ 7 ರಿಂದ ಸಭಾ ಕಾರ್ಯಕ್ರಮ ಪ್ರಶಸ್ತಿ ಪ್ರದಾನ ಹಾಗೂ ರಾತ್ರಿ 9 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಪಂಚವಟಿ, ಕಂಸವಿವಾಹ, ಸುಧನ್ವ ಮೋಕ್ಷ, ಮಹಿರಾವಣ ಕಾಳಗ ಎಂಬ ಪೌರಾಣಿಕ ಪ್ರಸಂಗಗಳು ಮಂಜಾನೆಯವರೆಗೆ ಪ್ರದರ್ಶನಗೊಳ್ಳಲಿದೆ ಎಂದರು. ಬಳಗದ ಟ್ರಸ್ಟಿಗಳಾದ ರವಿಶಂಕರ್ ಭಟ್, ಅಶ್ವಿತ್ ಮಾರ್ಲ ಬಳಗದ ಹಿರಿಯ ಸದಸ್ಯರಾದ‌ ಸೂರ್ಯನಾರಾಯಣ ಭಟ್ ಶ್ರೀನಿವಾಸ್ , ಪಶುಪತಿ ಆಚಾರ್, ಸುರೇಶ್ ಅವರು ಉಪಸ್ಥಿತರಿದ್ದರು. ಬಳಗದ ಸದಸ್ಯ ಸತೀಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಯಕ್ಷಗಾನ ಆಮಂತ್ರಣಕ್ಕೆ ಮುಂದೆ ಓದಿರಿ

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಆ.3ರಂದು ಭ್ರಾಮರಿ ಯಕ್ಷವೈಭವ; ಆಮಂತ್ರಣ ಪತ್ರಿಕೆ ಬಿಡುಗಡೆ, ವಿವರಗಳು ಇಲ್ಲಿವೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*