ಜಿಲ್ಲಾ ಸುದ್ದಿ

ಆ.3ರಂದು ಭ್ರಾಮರಿ ಯಕ್ಷವೈಭವ; ಆಮಂತ್ರಣ ಪತ್ರಿಕೆ ಬಿಡುಗಡೆ, ವಿವರಗಳು ಇಲ್ಲಿವೆ

ಜಾಹೀರಾತು

ಯಕ್ಷಗಾನ ಎಂಬುದು ಕೇವಲ ಒಂದು ಕಲೆಯಲ್ಲ. ಅದು ಪೂಜೆಗೆ ಸಮಾನಾದ ಸೇವೆ.vಯಕ್ಷಗಾನದ ಸೇವೆ ಮಾಡುವವರಿಗೆ ಸದಾ ದೇವತಾನುಗ್ರಹ ಪ್ರಾಪ್ತವಾಗುತ್ತದೆ ಎಂದು ಉದ್ಯಮಿ ಬಿ. ಶಿವಪ್ರಸಾದ್ ಪ್ರಭು ಅಭಿಪ್ರಾಯ ಪಟ್ಟರು.

ಮಂಗಳೂರಿನಲ್ಲಿ ಭ್ರಾಮರೀ ಯಕ್ಷಮಿತ್ರರು ಟ್ರಸ್ಟ್ ಸಂಯೋಜನೆಯಲ್ಲಿ ಆಗಸ್ಟ್ 3 ರಂದು ಪುರಭವನದಲ್ಲಿ ಜರಗಲಿರುವ ಭ್ರಾಮರೀ ಯಕ್ಷವೈಭವ 2024 ರ ಆಮಂತ್ರಣ ಪತ್ರಿಕೆ ಮತ್ತು ಪೋಸ್ಟರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಕಳೆದ ಹಲವು ವರ್ಷಗಳಿಂದ ಮಾದರಿ ಕಾರ್ಯಕ್ರಮ ನೀಡುವ ಮೂಲಕ ಮನೆಮಾತಾಗಿದೆ ಎಂದರು.
ಟ್ರಸ್ಟಿನ ಅಧ್ಯಕ್ಷ ವಿನಯಕೃಷ್ಣ ಕುರ್ನಾಡು ಅವರು ಮಾತನಾಡಿ ಆ. 3 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ 4 ರಿಂದ ಮರುದಿನ ಮುಂಜಾನೆಯವರೆಗೆ ಯಕ್ಷಗಾನ ಜರಗಲಿದೆ. ಸಂಜೆ 4 ರಿಂದ ಯಕ್ಷಛಾಯಾಚಿತ್ರ ಸಂಗ್ರಹಕ ಮನೋಹರ ಕುಂದರ್ ಅವರ ಅಪೂರ್ವ ಯಕ್ಷಛಾಯಾಚಿತ್ರ ಪ್ರದರ್ಶನ ಜರಗಲಿದೆ. ಸಂಜೆ 7 ರಿಂದ ಸಭಾ ಕಾರ್ಯಕ್ರಮ ಪ್ರಶಸ್ತಿ ಪ್ರದಾನ ಹಾಗೂ ರಾತ್ರಿ 9 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಪಂಚವಟಿ, ಕಂಸವಿವಾಹ, ಸುಧನ್ವ ಮೋಕ್ಷ, ಮಹಿರಾವಣ ಕಾಳಗ ಎಂಬ ಪೌರಾಣಿಕ ಪ್ರಸಂಗಗಳು ಮಂಜಾನೆಯವರೆಗೆ ಪ್ರದರ್ಶನಗೊಳ್ಳಲಿದೆ ಎಂದರು. ಬಳಗದ ಟ್ರಸ್ಟಿಗಳಾದ ರವಿಶಂಕರ್ ಭಟ್, ಅಶ್ವಿತ್ ಮಾರ್ಲ ಬಳಗದ ಹಿರಿಯ ಸದಸ್ಯರಾದ‌ ಸೂರ್ಯನಾರಾಯಣ ಭಟ್ ಶ್ರೀನಿವಾಸ್ , ಪಶುಪತಿ ಆಚಾರ್, ಸುರೇಶ್ ಅವರು ಉಪಸ್ಥಿತರಿದ್ದರು. ಬಳಗದ ಸದಸ್ಯ ಸತೀಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಯಕ್ಷಗಾನ ಆಮಂತ್ರಣಕ್ಕೆ ಮುಂದೆ ಓದಿರಿ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts