ಬಂಟ್ವಾಳ

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಉನ್ನತ ಅಧಿಕಾರಿಗಳ ಭೇಟಿ, ಕಾಮಗಾರಿ ಪರಿಶೀಲನೆ

ಜಾಹೀರಾತು

ಬಂಟ್ವಾಳ: ಅಮೃತ ಭಾರತ್ ರೈಲ್ವೇ ಯೋಜನೆಯಡಿ ಅಭಿವೃದ್ಧಿಗೊಳ್ಳುತ್ತಿರುವ ಬಂಟ್ವಾಳ ರೈಲ್ವೇ ನಿಲ್ದಾಣಕ್ಕೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಬುಧವಾರ ಸಂಜೆ ಆಗಮಿಸಿ, ಕಾಮಗಾರಿ ಪರಿಶೀಲನೆ ನಡೆಸಿದರು.

ಸಾಮಾಜಿಕ ಕಾರ್ಯಕರ್ತ ಲಕ್ಷ್ಮೀನಾರಾಯಣ ಬಂಟ್ಚಾಳ ಅವರು ಈ ಕುರಿತು ಅಹವಾಲು  ಸಲ್ಲಿಸಿದ್ದರು. ಈ ಕುರಿತು ಸಂಸದ ಬ್ರಿಜೇಶ್ ಚೌಟ ಅವರ ವಿಶೇಷ ಕೋರಿಕೆ ಹಾಗೂ ರೈಲ್ವೆ ಸಚಿವ ಸೋಮಣ್ಣ ಸೂಚನೆಯಂತೆ ರೈಲ್ವೇ ಇಲಾಖೆಯ ಡಿಆರ್ ಎಂ. ಶಿಲ್ಪಾ ಅಗರವಾಲ್, ನೈರುತ್ಯ ರೈಲ್ವೇ  ಮೈಸೂರು ವಿಭಾಗದ ಜಿಎಂ ಅರವಿಂದ ಶ್ರಿವಾಸ್ತವ್ ಸಹಿತ ಅಧಿಕಾರಿಗಳ ತಂಡ ಅಗಮಿಸಿ ಬಂಟವಾಳ ರೈಲ್ವೇ ನಿಲ್ದಾಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಯ ಗುಣಮಟ್ಟ ಅವ್ಯವಸ್ಥೆಯನ್ನು ಪರಿಶೀಲಿಸಿದರು.ಇಲ್ಲಿನ ಶೌಚಾಲಯ, ಪ್ಲಾಟ್ಫಾರ್ಮ್ ಮೇಲ್ಛಾವಣಿ ಸಹಿತ ಸಮಸ್ಯೆಗಳ ಕುರಿತು ಅವರ ಗಮನಕ್ಕೆ ತರಲಾಯಿತು. ಅಧಿಕಾರಿಗಳು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆಯು ಸೂಚಿಸಿದರು. ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಜಿ.ಪಂ.ಮಾಜಿ ಸದಸ್ಯ ರವೀಂದ್ರ ಕಂಬಳಿ, ಪ್ರಮುಖರಾದ ಪುಪ್ಪರಾಜ ಚೌಟ, ಚರಣ್ ಜುಮಾದಿಗುಡ್ಡೆ, ವಸಂತ ಮಲ್ಯ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.