ಜಿಲ್ಲಾ ಸುದ್ದಿ

RAIN UPDATE: ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆ: ಆಲಡ್ಕದಲ್ಲಿ 6 ಮನೆಗಳ ಸದಸ್ಯರ ಸ್ಥಳಾಂತರ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಗುರುವಾರ ರಜೆ

ಬಂಟ್ವಾಳ ಗೂಡಿನಬಳಿಯಲ್ಲಿ ದೋಣಿ ಸನ್ನದ್ಧ ಸ್ಥಿತಿಯಲ್ಲಿ

ತುಂಬೆ ಡ್ಯಾಂನ ಗೇಟ್ ಗಳನ್ನು ತೆರೆಯಲಾಗಿದೆ.

ಪಾಣೆಮಂಗಳೂರು ಆಲಡ್ಕದಲ್ಲಿ ಕರ್ತವ್ಯನಿರತ ಕಂದಾಯ ಇಲಾಖೆ ಸಿಬಂದಿ

ಬಂಟ್ವಾಳ: ಬಂಟ್ವಾಳ ತಾಲೂಕಿನಾದ್ಯಂತ ಮಳೆಯಾಗುತ್ತಿದ್ದು, ಬುಧವಾರ ರಾತ್ರಿ ಗಾಳಿ ಮಳೆ ಸುರಿಯುತ್ತಿದೆ. ಈ ಮಧ್ಯೆ ನೇತ್ರಾವತಿ ನದಿ ನೀರಿನ ಮಟ್ಟ ರಾತ್ರಿ 10.30ಕ್ಕೆ 7.3 ಮೀಟರ್ ಗೆ ಏರಿಕೆ ಕಂಡಿದ್ದು, ಅಪಾಯದ ಮಟ್ಟ 8.5 ಆಗಿದೆ. ಈ ಹಿನ್ನೆಲೆಯಲ್ಲಿ  ತೀರ ಪ್ರದೇಶವಾದ ಪಾಣೆಮಂಗಳೂರಿನ ಆಲಡ್ಕದ 6 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇನ್ನುಳಿದಂತೆ ಅಪಾಯದ ಮಟ್ಟ ಸಂಭವಿಸಿದರೆ, ಉಳಿದ ಸಂಭ್ಯಾವ್ಯ ಅಪಾಯದ ಜಾಗದಲ್ಲಿ ವಾಸಿಸುವವರಿಗೂ ಸೂಚನೆ ನೀಡಲಾಗಿದ್ದು, ತಾಲೂಕಾಡಳಿತ ಯಾವುದೇ ಅಪಾಯವನ್ನು ಎದುರಿಸಲು ಸನ್ನದ್ಧವಾಗಿದೆ ಎಂದು ತಹಸೀಲ್ದಾರ್ ಡಿ.ಅರ್ಚನಾ ಭಟ್ ಮಾಹಿತಿ ನೀಡಿದ್ದಾರೆ.

18ರಂದು ಶಾಲೆ, ಪಿಯುವರೆಗೆ ರಜೆ: ರಾತ್ರಿ ಜಿಲ್ಲಾಧಿಕಾರಿ ಹೊರಡಿಸಿದ ಸೂಚನೆಯಂತೆ ಬಂಟ್ವಾಳ ತಾಲೂಕಿನ ಅಂಗನವಾಡಿ, ಶಾಲೆ, ಹೈಸ್ಕೂಲು ಮತ್ತು ಪಿಯುಸಿವರೆಗೆ ರಜೆ ಘೋಷಿಸಲಾಗಿದೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ