ಬಂಟ್ವಾಳ: ಮೈದುಂಬಿ ಹರಿದ ನೇತ್ರಾವತಿ – ನದಿ ತೀರದ ಚಿತ್ರಣ

ಜಕ್ರಿಬೆಟ್ಟು

ಬಂಟ್ವಾಳ ತಾಲೂಕಿನಾದ್ಯಂತ ಶುಕ್ರವಾರವೂ ಮಳೆ ಮುಂದುವರಿದಿದ್ದು, ಗಾಳಿ, ಸಿಡಿಲು ಗುಡುಗು ಸಹಿತ ಮಳೆಗೆ ಹಲವೆಡೆ ಹಾನಿಯೂ ಸಂಭವಿಸಿದೆ. ಬಂಟ್ವಾಳ ತಾಲೂಕಿನಲ್ಲಿ ಹರಿಯುವ ಜೀವನದಿ ನೇತ್ರಾವತಿ ಬಂಟ್ವಾಳ ಪೇಟೆಯ ತಗ್ಗು ಪ್ರದೇಶ, ಪಾಣೆಮಂಗಳೂರಿನ ಆಲಡ್ಕ ಸಹಿತ ಕೆಲವು ಭಾಗಗಳಲ್ಲಿ ರಸ್ತೆ, ಮನೆ, ಅಂಗಡಿ ಮುಂಗಟ್ಟುಗಳನ್ನು ಪ್ರವೇಶಿಸಿದ್ದು, ತೀರ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಬೆಳಗಿನ ಹೊತ್ತಿಗೆ ನೇತ್ರಾವತಿ ಅಪಾಯದ ಮಟ್ಟ 8.5 ಮೀಟರ್ ಸನಿಹ ಬಂದಿದ್ದು, ಮಧ್ಯಾಹ್ನದ ವೇಳೆ ಅಪಾಯದ ಮಟ್ಟ ದಾಟಿ ಹರಿಯಲಾರಂಭಿಸಿತು.  ಬಿ.ಸಿ.ರೋಡ್, ಬಂಟ್ವಾಳ ಪಾಣೆಮಂಗಳೂರುಗಳ ತಗ್ಗು ಪ್ರದೇಶ ಹಾಗೂ ಪ್ರತಿ ಬಾರಿಯೂ ಮಳೆ ಬಂದಾಗ ನೀರು ನುಗ್ಗುವ ಜಾಗಗಳಾದ ಬಡ್ಡಕಟ್ಟೆಯ ಬಸ್ ನಿಲ್ದಾಣ, ಜಕ್ರಿಬೆಟ್ಟು, ಪಾಣೆಮಂಗಳೂರಿನ ಆಲಡ್ಕ, ಗೂಡಿನಬಳಿಯ ಕಂಚಿಕಾರಪೇಟೆ ಸಹಿತ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದವು. ಬಡ್ಡಕಟ್ಟೆ ಬಸ್ ನಿಲ್ದಾಣಕ್ಕೆ ಬಸ್ಸುಗಳು ಮೊದಲೇ ಬರುವುದಿಲ್ಲ. ನದಿಯನ್ನು ಸೇರುವ ತೋಡು ಸನಿಹವೇ ಇರುವ ಕಾರಣ ನೀರು ಸುಲಭವಾಗಿ ಒಳನುಗ್ಗಿತು. ಬಸ್ತಿಪಡ್ಪು ಪ್ರದೇಶಕ್ಕೂ ಸಂಜೆಯ ವೇಳೆ ನೀರು ಹರಿಯಲಾರಂಭಿಸಿದ್ದು, ರಸ್ತೆಗೆ ನುಗ್ಗಿದೆ. ಮುಂಜಾಗರೂಕತಾ ಕ್ರಮವಾಗಿ ತಾಲೂಕಾಡಳಿತ ಕಂಚಿಕಾರಪೇಟೆಯ ರಸ್ತೆಯನ್ನು ವಾಹನ ಸಂಚಾರಕ್ಕೆ ನಿರ್ಬಂಧಿಸಿದ್ದು, ಆದರೂ ಹೊರಭಾಗಗಳಿಂದ ಅಲ್ಲಿಗೆ ಆಗಮಿಸಿದ ಜನರು ಫೊಟೋ ತೆಗೆಯುವುದರಲ್ಲಿ ತಲ್ಲೀನರಾಗಿದ್ದ ದೃಶ್ಯಗಳು ಕಂಡುಬಂದವು. ಇಂದಿನ ಚಿತ್ರಗಳಿಗೆ ಮುಂದೆ ಓದಿರಿ.

 

 

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ: ಮೈದುಂಬಿ ಹರಿದ ನೇತ್ರಾವತಿ – ನದಿ ತೀರದ ಚಿತ್ರಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*