ಕಲ್ಲಡ್ಕ

ಶಾಮಿಯಾನ ಸಾಮಗ್ರಿ ಇಳಿಸುವ ವೇಳೆ ವಿದ್ಯುತ್ ಶಾಕ್: ಓರ್ವ ಕಾರ್ಮಿಕ ಮೃತ್ಯು

 

ವಾಹನವೊಂದರಿಂದ ಶಾಮಿಯಾನದ ಸಾಮಾಗ್ರಿಗಳನ್ನು ಇಳಿಸುವ ವೇಳೆ ವಿದ್ಯುತ್ ಶಾಕ್ ನಿಂದ ನಾಲ್ವರು ಕೆಲಸಗಾರರಿಗೆ ಗಾಯವಾಗಿದ್ದು, ಅದರಲ್ಲಿ  ಓರ್ವ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮದ್ಯೆ ಮೃತಪಟ್ಟ  ಘಟನೆ  ಕಡೇಶಿವಾಲಯ ಸಮೀಪ ಕೆಮ್ಮನ್ ಕಾಡಬೆಟ್ಟು ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಬಿಹಾರ ಮೂಲದ ಕುಂದನ್ ಕುಮಾರ್ (20) ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದು, ಬಾಕಿ 4 ಜನ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇತರ ಗಾಯಾಳುಗಳ ಪೈಕಿ ಓರ್ವ ಸ್ಥಳೀಯರಾಗಿದ್ದರೆ, ಮತ್ತೆ ಮೂವರು ಹೊರರಾಜ್ಯದವರು. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಹೆಚ್ಚುನ ಮಾಹಿತಿ ಇನ್ನಷ್ಟೇ ಬರಬೇಕಿದೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ