ಬಂಟ್ವಾಳ

ಪೊಳಲಿ ಚೆಂಡಿನಗದ್ದೆಯಲ್ಲಿ ಯಾಂತ್ರೀಕೃತ ಭತ್ತ ನಾಟಿ ಕಾರ್ಯಕ್ರಮಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ಜಾಹೀರಾತು
ಬಂಟ್ವಾಳ ಕೃಷಿ ಇಲಾಖೆ ವತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಮುತುವರ್ಜಿಯಲ್ಲಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಚೆಂಡಿನಗದ್ದೆಯಲ್ಲಿ ಸುಮಾರು 2.50 ಎಕರೆ ಗದ್ದೆಯಲ್ಲಿ  5 ನೇ ವರ್ಷದ ಭದ್ರತಳಿಯ ಯಾಂತ್ರೀಕೃತ ಭತ್ತ ನಾಟಿಗೆ  ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಯಂತ್ರದ ಮೂಲಕ ನೇಜಿ ನೆಟ್ಟು ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು ಕೃಷಿ ಇಲಾಖೆ ಹಾಗೂ ಊರಿನವರ ಸಹಕಾರದಿಂದ ಭತ್ತದ ಕೃಷಿ ನಾಟಿಯನ್ನು ಮಾಡಲಾಗಿದೆ. ಕಳೆದ ಬಾರಿ ಮಾಡಿದ ಕೃಷಿಯ ಮೂಲಕ  95 ಸಾವಿರದಷ್ಟು ದೇವಸ್ಥಾನಕ್ಕೆ ಉಳಿತಾಯವಾಗಿದ್ದು, ಇದರ ಹುಲ್ಲು ಸ್ಥಳೀಯ ಅನೇಕ ಕೃಷಿಕರಿಗೆ ಉಪಯೋಗವಾಗಿದೆ ಎಂದು ತಿಳಿಸಿದರು.
ಭತ್ತದ ಕೃಷಿಯಿಂದ ಹೆಕ್ಟೇರ್ ಗೆ 80 ಸಾವಿರ ರೂ ಲಾಭ ಗಳಿಸುವುದು ನಿಜಕ್ಕೂ  ಉತ್ತಮ ಆದಾಯ ಎಂದು ಹೇಳಿದ ಅವರು ಭತ್ತದ ಕೃಷಿ ಲಾಭದಾಯಕ ಕೃಷಿ ಎಂಬುದನ್ನು ಸೂಚಿಸುತ್ತದೆ,   ಇದರಿಂದ ಇನ್ನಷ್ಟು ಭತ್ತದ ಕೃಷಿ ಚಟುವಟಿಕೆಗೆ ಉತ್ತೇಜನ ನೀಡುತ್ತದೆ ಎಂದರು. ಇದೇ ಸಂದರ್ಭ ಮೂರು ಜನ ರೈತರಿಗೆ ಮಣ್ಣು ಆರೋಗ್ಯ ಚೀಟಿ ವಿತರಣೆ ನಡೆಸಲಾಯಿತು.
ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ, ಉಪನಿರ್ದೇಶಕಿ ಕುಮುದ, ಸಹಾಯಕ ಕೃಷಿ ನಿರ್ದೇಶಕಿ ವೀಣಾ ಶೆಟ್ಟಿ, ಕೃಷಿ ಅಧಿಕಾರಿ ನಂದನ್ ಶೆಣೈ, ತಾಂತ್ರಿಕ ಅಧಿಕಾರಿ ಹನುಮಂತ ಕಾಳಗಿ, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಪ್ರಮುಖರಾದ ವೆಂಕಟೇಶ ನಾವಡ,  ಸುಕೇಶ್ ಚೌಟ, ಕಾರ್ತಿಕ್ ಬಲ್ಲಾಳ್, ಚಂದ್ರಶೇಖರ್ ಶೆಟ್ಟಿ, ಯಶವಂತ ಪೊಳಲಿ, ಚಂದ್ರಾವತಿ ಪೊಳಲಿ, ಯಶೋಧ ಕಲ್ಕುಟ್ಟ, ಲೋಕೇಶ್ ಭರಣಿ,ನವೀನ ಕಟ್ಟಪುಣಿ, ಉಪಸ್ಥಿತರಿದ್ದರು.
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.