ಬಂಟ್ವಾಳ: ರಾಮರಾಜ್ಯಕ್ಕಾಗಿ ಸಾಧನೆ ಮಾಡುವುದರ ಜೊತೆಗೆ ಭ್ರಷ್ಟಾಚಾರ, ಅನೈತಿಕತೆ ಮತ್ತು ಅರಾಜಕತೆ ವಿರುದ್ಧ ಹೋರಾಟ ಅನಿವಾರ್ಯ ಎಂದು ಹಿಂದು ಜನಜಾಗೃತಿ ಸಮಿತಿಯ ಡಾ. ಪ್ರಣವ್ ಮಲ್ಯ ಹೇಳಿದರು.
ಬಂಟ್ವಾಳದ ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ನಡೆದ ಗುರುಪೂರ್ಣಿಮಾ ಮಹೋತ್ಸವದಲ್ಲಿ ಅವರು ಮಾತನಾಡಿದರು. ನ್ಯಾಯವಾದಿ ಸತೀಶ್ ಈ ಸಂದರ್ಭ ಮಾತನಾಡಿದರು. ಮಂಗಳೂರು, ಉಜಿರೆ ಸೇರಿದಂತೆ ದೇಶದಾದ್ಯಂತ ಸಮಿತಿ ವತಿಯಿಂದ 71 ಕಡೆಗಳಲ್ಲಿ ಗುರುಪೂರ್ಣಿಮಾ ಮಹೋತ್ಸವ ಆಯೋಜಿಸಲಾಗಿತ್ತು. ಬಿ.ಸಿ.ರೋಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಬಾಲಕೃಷ್ಣ, ಡಾ ಶಿವಪ್ರಸಾದ್ ಶೆಟ್ಟಿ, ಸುಧಾಕರ ಶೆಟ್ಟಿ, ಸಂದೀಪ್, ಶಿವಶಂಕರ್, ಅನಿಲ್ ಪಂಡಿತ್, ಅಶೋಕ್ ಶೆಟ್ಟಿ ಸರಪಾಡಿ, ಡಾ. ಸತ್ಯಶಂಕರ್, ಗಿರೀಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು. ಬೆಳಗ್ಗೆ ಶ್ರೀ ವ್ಯಾಸಪೂಜೆ ಮತ್ತು ಭಕ್ತರಾಜ ಮಹಾರಾಜ ಪ್ರತಿಮೆಯ ಪೂಜೆ ನೆರವೇರಿತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಭ್ರಷ್ಟಾಚಾರ, ಅನೈತಿಕತೆ, ಅರಾಜಕತೆ ವಿರುದ್ಧ ಹೋರಾಟ: ಡಾ. ಪ್ರಣವ್ ಮಲ್ಯ"
Be the first to comment on "ಭ್ರಷ್ಟಾಚಾರ, ಅನೈತಿಕತೆ, ಅರಾಜಕತೆ ವಿರುದ್ಧ ಹೋರಾಟ: ಡಾ. ಪ್ರಣವ್ ಮಲ್ಯ"