ಬಂಟ್ವಾಳ

ಫೊಟೋಗ್ರಾಫರ್ ಅಸೋಸಿಯೇಶನ್ ಬಂಟ್ವಾಳ ವಲಯ ವಾರ್ಷಿಕ ಸಭೆ

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ.ಕ ಮತ್ತು ಉಡುಪಿ ಜಿಲ್ಲೆಯ ಬಂಟ್ವಾಳ ವಲಯದ 25ನೇ ವಾರ್ಷಿಕ ಸಭೆ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಅಧ್ಯಕ್ಷ ಕಿಶೋರ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

ಜಿಲ್ಲಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್ ವಾರ್ಷಿಕ ಸಭೆ ಉದ್ಘಾಟಿಸಿ ಶುಭ ಹಾರೈಸಿದರು. ಜಿಲ್ಲಾ ಸಂಚಾಲಕ ಕರುಣಾಕರ  ಕಾಣಂಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್ ಬಂಟ್ವಾಳ್,  ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷರಾದ ಆನಂದ್ ಎನ್, ಜಿಲ್ಲಾ ಉಪಾಧ್ಯಕ್ಷರಾದ ರಮೇಶ್ ಕಲಾಶ್ರೀ, ಜಿಲ್ಲಾ ಕೋಶಾಧಿಕಾರಿ ನವೀನ್ ರೈ ಪಂಜಳ, ವಿವಿದೋದ್ದೇಶ ಸ.ಸಂ.ನಿ. ನಿರ್ದೇಶಕರಾದ ಹರೀಶ್ ರಾವ್ ಹಾಗೂ ವಲಯದ ಗೌರವಾಧ್ಯಕ್ಷ ಹರೀಶ್ ಕುಂದರ್, ವಲಯದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ, ಕೋಶಾಧಿಕಾರಿ ವರುಣ್ ಕಲ್ಲಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗತ ವರ್ಷದ ವರಧಿಯನ್ನು ರವಿ ಕಲ್ಪನೆ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ಪ್ರಶಾಂತ್  ಕಲ್ಲಡ್ಕ ವಾರ್ಷಿಕ ವರಧಿ ವಾಚಿಸಿದರು. ಕೋಶಾಧಿಕಾರಿ ವರುಣ್  ಕಲಡ್ಕ ವಾರ್ಷಿಕ ಜಮಾ ಖರ್ಚು ಮಂಡನೆ ಮಾಡಿದರು. 23-24 ನೇ ಸಾಲಿನ ಶೆಕ್ಷಣಿಕ ವರ್ಷದಲ್ಲಿ ಎಸ್. ಎಸ್. ಎಲ್. ಸಿ ಮತ್ತು ಪಿ.ಯು.ಸಿ ಯಲ್ಲಿ ಗರಿಷ್ಠ  ಅಂಕ  ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾನಿಧಿ ನೀಡಿ ಗೌರವಿಸಲಾಯಿತು. ಹರೀಶ್ ಕುಂದರ್ ಸ್ವಾಗತಿಸಿ, ಯೋಗೀಶ್ ಮೊಗರ್ನಾಡ್ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ರಾಜೇಂದ್ರ ಬಿ.ಸಿ. ರೋಡ್ ನಿರೂಪಿಸಿದರು

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ