ಏರ್ಯಬೀಡುವಿನಲ್ಲಿ ವಿದ್ಯಾರ್ಥಿಗಳ ಸಾಹಿತ್ಯ ಕಮ್ಮಟ

 ಏರ್ಯ ಆಳ್ವ ಫೌಂಡೇಷನ್ ಮತ್ತು ಕನ್ನಡ ಸಾಹಿತ್ಯ ಪರಿಷತ್, ಬಂಟ್ವಾಳ ಇದರ ಆಶ್ರಯದಲ್ಲಿ ಏರ್ಯಬೀಡುವಿನಲ್ಲಿ ವಿದ್ಯಾರ್ಥಿಗಳ ಸಾಹಿತ್ಯ ಕಮ್ಮಟವನ್ನು ಏರ್ಯಬೀಡು ಆನಂದಿ ಎಲ್. ಆಳ್ವ ಉದ್ಘಾಟಿಸಿದರು.

ಬಂಟ್ವಾಳ: ಏರ್ಯ ಲಕ್ಷ್ಮೀನಾರಾಯಣ ಆಳ್ವರು ಎಂದಿಗೂ ತಮ್ಮ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ಅಂಟಿಸಿ ಕೊಂಡವರಲ್ಲ. ಸಾರ್ವಜನಿಕ ಕ್ಷೇತ್ರದಲ್ಲಿ ಇದ್ದುಕೊಂಡರೂ ಕಳಂಕರಹಿತವಾಗಿ ಬದುಕಿರುವುದು ಅವರ ಯೋಗ್ಯತೆಗೆ ಸಂದ ಗೌರವ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಂ ಪೂಜಾರಿ ಹೇಳಿದರು.

ಏರ್ಯ ಆಳ್ವ ಫೌಂಡೇಷನ್ ಮತ್ತು ಕನ್ನಡ ಸಾಹಿತ್ಯ ಪರಿಷತ್, ಬಂಟ್ವಾಳ ಇದರ ಆಶ್ರಯದಲ್ಲಿ ಏರ್ಯಬೀಡುವಿನಲ್ಲಿ ಭಾನುವಾರ ನಡೆದ ವಿದ್ಯಾರ್ಥಿಗಳ ಸಾಹಿತ್ಯ ಕಮ್ಮಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಇಂತಹ ಸಾಹಿತ್ಯಿಕ ವಾತವರಣವನ್ನು ಕಲ್ಪಿಸಿಕೊಟ್ಟಾಗ ಯುವ ಸಮುದಾಯ ಉತ್ತಮ ದಾರಿಯಲ್ಲಿ ಸಾಗಲು ಸಾಧ್ಯವಿದೆ ಎಂದರು.

ಗೌರವ ಉಪಸ್ಥಿತರಿದ್ದ ಏರ್ಯ ಬೀಡು ಬಾಲಕೃಷ್ಣ ಹೆಗ್ಡೆ ಮಾತನಾಡಿ ಏರ್ಯರು ಓದಾಟ ಮತ್ತು ಓಡಾಟ ಮಾಡಿಕೊಂಡು ಸಾಹಿತ್ಯ ರಚಿಸಿದವರು. ಗ್ರಾಮೀಣ ಭಾಗದ ಈ ಪರಿಸರ ಅವರ ಸಾಹಿತ್ಯ ರಚನೆಗೆ ಪೂರಕವಾಗಿತ್ತು ಎಂದು ತಿಳಿಸಿದರು.

ಏರ್ಯಬೀಡುವಿನ ಆನಂದಿ ಎಲ್. ಆಳ್ವ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಏರ್ಯಬೀಡುವಿನ ರಾಜರಾಂ ರೈ, ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣ ಕುಮಾರ್ ಪೂಂಜ, ಹೊಟೇಲ್ ಉದ್ಯಮಿ ಚಂದ್ರಹಾಸ ಶೆಟ್ಟಿ, ಅಮ್ಟಾಡಿ ಗ್ರಾ.ಪಂ. ಅಧ್ಯಕ್ಷ ವಿಜಯ್ ಕುಮಾರ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಏರ್ಯರ ನೆನೆಪು ಮತ್ತು ಓದುವ ಹವ್ಯಾಸದ ಬಗ್ಗೆ ನಿವೃತ್ತ ಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್, ಕಥೆ ರಚನೆಯ ಬಗ್ಗೆ ತುಳಸಿ ಕೈರಂಗಳ, ಕವಿತೆ ರಚನೆಯ ಬಗ್ಗೆ ಜಯರಾಮ ಪಡ್ರೆ ವಿದ್ಯಾರ್ಥಿಗಳಿಗೆ ಕಾರ್ಯಗಾರ ನಡೆಸಿಕೊಟ್ಟರು.
ಕಾರ್ಯಕ್ರಮ ಸಂಯೋಜಕ ದಾಮೋರ್ ಮಾಸ್ತರ್ ಸ್ವಾಗತಿಸಿ, ವಂದಿಸಿದರು. ಕೇಶವ ಎಚ್.ಕಟೀಲು ಕಾರ್ಯಕ್ರಮ ನಿರೂಪಿಸಿದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಏರ್ಯಬೀಡುವಿನಲ್ಲಿ ವಿದ್ಯಾರ್ಥಿಗಳ ಸಾಹಿತ್ಯ ಕಮ್ಮಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*