ಬಂಟ್ವಾಳ

ಶ್ರೀ ಸಾಯಿ ಕಿಡ್ಸ್ ಝೋನ್ ನಲ್ಲಿ ಆಟಿದ ಕೂಟ

ಜಾಹೀರಾತು

ಬಂಟ್ವಾಳ: ಶ್ರೀಸಾಯಿ ಕಿಡ್ ಝೋನ್ ಇದರ ಆಶ್ರಯದಲ್ಲಿ ಶಿಕ್ಷಕ ರಕ್ಷಕ ಸಮಿತಿಯ ಸಹಯೋಗದೊಂದಿಗೆ ಆಟಿದ ಕೂಟ ಕಾರ್ಯಕ್ರಮ ಶನಿವಾರ ಬಿ.ಸಿ.ರೋಡಿನ ಸಾಯಿ ಕಿಡ್‌ಝೋನ್‌ನ ಸಭಾಂಗಣದಲ್ಲಿ ನಡೆಯಿತು.


ಜೆಸಿಐ ವಲಯ ತರಬೇತುದಾರ(ಪ್ರೋವಿಜನಲ್), ಪತ್ರಕರ್ತ ಸಂದೀಪ್ ಸಾಲ್ಯಾನ್ ಆಟಿದ ಕೂಟ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳ ಆರ್ಟ್ ಕ್ರಾಪ್ಟ್ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ ನಮ್ಮ ಹಿರಿಯರಿಗೆ ಆಟಿ ಕಷ್ಟದ ತಿಂಗಳು ಆಗಿದ್ದರೂ ಕೂಡ ಆ ತಿಂಗಳಿನಲ್ಲಿದ್ದ ವೈಶಿಷ್ಠ ಪೂರ್ಣ ಆಚರಣೆಗಳು ತುಳುವರ ವೈಚಾರಿಕತೆಯ ಬದುಕನ್ನು, ಕಷ್ಟದ ಸಂದರ್ಭದಲ್ಲೂ ಪರಸ್ಪರ ಹೊಂದಿಕೊಂಡು ಬದುಕುವ ಜೀವನ ವಿಧಾನವನ್ನು ಅನಾವರಣಗೊಳಿಸುತ್ತದೆ. ಆಟಿಯ ಒಂದೊಂದು ಆಚರಣೆಯ ಹಿಂದೆಯೂ ತನ್ನದೇ ಆದ ಉದ್ದೇಶ, ದೂರದೃಷ್ಟಿ ಚಿಂತನೆ ಹಾಗೂ ಅಧ್ಯಯನಕ್ಕೆ ಯೋಗ್ಯವಾಗುವಂತ ವಿಚಾರಗಳಿರುವುದನ್ನು ಕಾಣಬಹುದಾಗಿದೆ. ತುಳುನಾಡಿನ ವಿಶಿಷ್ಠ ಪರಂಪರೆ, ಆಚರಣೆಗಳನ್ನು ಮಕ್ಕಳಿಗೆ ಪೋಷಕರು ತಿಳಿಸಿಕೊಡಬೇಕಾಗಿದೆ. ಇಷ್ಟೆಲ್ಲಾ ವೈಶಿಷ್ಯತೆಗಳಿರುವ ಆಟಿ ನಿಜಾರ್ಥದಲ್ಲಿ ತುಳುನಾಡಿನ ಬ್ಯೂಟಿ ಎಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಚಾಲಕ ಐತಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಶಿಕ್ಷಕರ ನಿರಂತರ ಪ್ರಯತ್ನ ಹಾಗೂ ವಿದ್ಯಾರ್ಥಿಗಳ ಪೋಷಕರ ಸಹಕಾರದಿಂದ ಕಾರ್ಯಕ್ರಮ ಯಶಸ್ಸು ಕಂಡಿದೆ. ಪೋಷಕರು ತಮ್ಮ ಮನೆಯಲ್ಲಿಯೇ ಬಗೆ ಬಗೆಯ ಆಹಾರಗಳನ್ನು ತಯಾರಿಸಿ ತಂದಿರುವುದು ಅಭಿನಂದನೀಯ ಎಂದರು.

ಪಿಟಿಎ ಅಧ್ಯಕ್ಷ ಜ್ಞಾನೇಶ್ ಜಿ. ರಾವ್, ಉಪಾಧ್ಯಕ್ಷೆ ಸುಪ್ರಿತಾ, ಕೋಶಧಿಕಾರಿ ದೇವೇಂದ್ರಪ್ಪ, ಶ್ರೀ ಸಾಯಿ ಎಜುಕೇಷನಲ್ ಟ್ರಸ್ಟ್‌ನ ಕೋಶಾಧಿಕಾರಿ ರಾಜೇಶ್ ಅಮೀನ್ ಅಥಿಗಳಾಗಿ ಭಾಗವಹಿಸಿದ್ದರು. ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ದೀಕ್ಷಿತಾ ಸ್ವಾಗತಿಸಿದರು, ಸಹಶಿಕ್ಷಕಿ ಪುಷ್ಪಲತಾ ವಂದಿಸಿದರು. ಆಡಳಿತ ಸಮಿತಿ ಸದಸ್ಯೆ ಆರತಿ ಅಮೀನ್ ಕಾರ್ಯಕ್ರಮ ನಿರೂಪಿಸಿದರು.ಶಾಲಾ ವಿದ್ಯಾಥಿಗಳಿಂದ ತುಳುನಾಡಿನ ವೈಭವ ಸಾರುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ತಯಾರಿಸಿದ ಕ್ರಾಪ್ಟ್ ವಸ್ತುಗಳ ಪ್ರದರ್ಶನ, ಆಟಿ ತಿಂಗಳ ವಿವಿಧ ಆಹಾರ ಖಾದ್ಯಗಳ ಪ್ರದರ್ಶನ ಹಾಗೂ ಸಹಭೋಜನ ನಡೆಯಿತು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts