ಬಂಟ್ವಾಳ

ಬಂಟ್ವಾಳ: ನೀರಿನ ಮಟ್ಟ ಏರಿಕೆ, ಕಾಳಜಿ ಕೇಂದ್ರ ವ್ಯವಸ್ಥೆ

ಬಂಟ್ವಾಳ: ಮಂಗಳವಾರ ರಾತ್ರಿಯಾಗುತ್ತಿದ್ದಂತೆ ನೇತ್ರಾವತಿ ನದಿ ನೀರಿನ ಮಟ್ಟದಲ್ಲಿ 10.4 ಮೀಟರ್ ಆಗಿದೆ. ನೇತ್ರಾವತಿ ನದಿ ಅಪಾಯದ ಮಟ್ಟ 8.5 ಆಗಿದ್ದು, ರಾತ್ರಿ ವೇಳೆಗೆ 10.4 ಮೀಟರ್ ಎತ್ತರದಲ್ಲಿ ನದಿ ಹರಿಯುತ್ತಿದ್ದ ಹಿನ್ನೆಲೆಯಲ್ಲಿ ಇನ್ನಷ್ಟು ಏರಿಕೆ ಕಾಣಬಹುದಾದ ಸಂಭವನೀಯತೆ ಇರುವ ಕಾರಣ, ಬಂಟ್ವಾಳ ಎಸ್.ವಿ.ಎಸ್. ಕನ್ನಡ ಮಾಧ್ಯಮ ಶಾಲೆಯಲ್ಲಿ ಕಾಳಜಿ ಕೇಂದ್ರ ಸ್ಥಾಪಿಸಲಾಗಿದ್ದು, ಅಲ್ಲಿ 17 ಮಂದಿಯನ್ನು ಶಿಫ್ಟ್ ಮಾಡಲಾಯಿತು. ನಾವೂರು ಪರ್ಲದ ಸೈಂಟ್ ಜೇಕಬ್ಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಒಂದು ಕುಟುಂಬವನ್ನು ಶಿಫ್ಟ್ ಮಾಡಲಾಗಿದೆ. ಇಲ್ಲಿ ಒಟ್ಟು 5 ಜನರಿದ್ದಾರೆ. ತಹಸೀಲ್ದಾರ್ ಡಿ.ಅರ್ಚನಾ ಭಟ್ ನೇತೃತ್ವದಲ್ಲಿ ಮುಂಜಾಗರೂಕತಾ ಕ್ರಮವನ್ನು ಕಂದಾಯ ಮತ್ತಿತರ ಇಲಾಖೆ ಸಿಬಂದಿ ಜೊತೆ ಕೈಗೊಂಡಿದ್ದಾರೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ