ಬಂಟ್ವಾಳ: ತುಳುಕೂಟ ಬಂಟ್ವಾಳ ಮತ್ತು ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಸ್ಥಾನ ಆಡಳಿತ ಸಮಿತಿ ಆಶ್ರಯದಲ್ಲಿ ಬಾನುವಾರ ಬೆಳಗ್ಗೆ ಆಟಿ ಅಮವಾಸ್ಯೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಪಾಲೆದ ಕೆತ್ತೆ (ಹಾಳೆ ಕೆತ್ತೆ) ಕಷಾಯ ವಿತರಣೆ ಬಿ.ಸಿ.ರೋಡ್ ರಕ್ತೇಶ್ವರಿ ದೇವಾಸ್ಥಾನದಲ್ಲಿ ನಡೆಯಿತು.
ತುಳುಕೂಟ ಬಂಟ್ವಾಳದ ಅಧ್ಯಕ್ಷ ಸುದರ್ಶನ್ ಜೈನ್ ಮತ್ತು ರಕ್ತೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ವಿಶ್ವನಾಥ್ ಬಿ. ಚಾಲನೆ ನೀಡಿದರು,
ಈ ಸಂದರ್ಭ ತುಳುಕೂಟ ಕಾರ್ಯದರ್ಶಿ ಎಚ್ಕೆ ನಯನಾಡು, ದೇವಾಲಯ ಸಮಿತಿಯ ಕಾರ್ಯದರ್ಶಿ ಎನ್. ಶಿವಶಂಕರ್, ಅರ್ಚಕರಾದ ರಘುಪತಿ ಭಟ್, ತುಳುಕೂಟದ ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್, ಕೆ.ಸೀತಾರಾಮ ಶೆಟ್ಟಿ, ಸುಕುಮಾರ್ ಬಂಟ್ವಾಳ, ಶೇಷಪ್ಪ ಮಾಸ್ಟರ್, ನಾರಾಯಣ ಸಿ.ಪೆರ್ಣೆ, ದೇವಪ್ಪ ಕುಲಾಲ್ ಪಂಜಿಕಲ್ಲು, ಪ್ರಕಾಶ್ ಶೆಟ್ಟಿ ಶ್ರೀಶೈಲ ತುಂಬೆ, ಸತೀಶ್ ಕುಮಾರ್ ಎಸ್. ನಿತೇಶ್ ಪಲ್ಲಿಕಂಡ, ಪುನೀತ್ ಮೈರನ್ ಪಾದೆ, ಪ್ರಮುಖರಾದ ಪರಮೇಶ್ವರ ಮೂಲ್ಯ ಮುನ್ನೂರು, ದಾಮೋದರ್ ಮಾಸ್ಟರ್ ಏರ್ಯ, ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…