ಬಂಟ್ವಾಳ

ಮಕ್ಕಳಿಗೆ ತೋಟರಚನೆ ಪಾಠ, ತರಕಾರಿ ಗಿಡಗಳ ನಾಟಿ

ಬಿ.ಸಿ.ರೋಡ್ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತೋಟಗಾರಿಕೆ ಮಾಹಿತಿ, ಕಾರ್ಯಾನುಭವ ಪ್ರಾತ್ಯಕ್ಷಿಕೆ ಶನಿವಾರ ನಡೆಯಿತು. ಶಾಲೆಯ ಹಿರಿಯ ವಿದ್ಯಾರ್ಥಿಗಳೂ ಪತ್ರಕರ್ತರೂ, ಜೇಸಿ ವಲಯ ತರಬೇತುದಾರರೂ ಆಗಿರುವ ಸಂದೀಪ್ ಸಾಲ್ಯಾನ್ ವಿದ್ಯಾರ್ಥಿಗಳಿಗೆ ತರಕಾರಿ ಗಿಡಗಳ ಕುರಿತು ಮಾಹಿತಿ ನೀಡಿ, ಅವುಗಳ ಬೀಜಬಿತ್ತನೆಯ ವಿಧಾನಗಳನ್ನು ತಿಳಿಸಿದರು.
ಸ್ವತಃ ಶ್ರಮದಾನ ಮಾಡುವ ಮೂಲಕ ಮಕ್ಕಳಿಗೆ ಕಾರ್ಯಾನುಭವದ ಪ್ರಾತ್ಯಕ್ಷಿಕೆ ಮಾಡಿದರು. ತರಕಾರಿ ಕೃಷಿಗೆ ಮಣ್ಣು , ಗೊಬ್ಬರವನ್ನು ತಂದು, ಮಕ್ಕಳಿಂದ ನಾಟಿ ಮಾಡಿಸಿದರು. ಬಳಿಕ ಸೂಕ್ತವಾದ ಬೇಲಿಯನ್ನು ರಚಿಸಲಾಯಿತು. ಶಾಲೆಯ ಮಕ್ಕಳಿಗೆ ತೋಟಗಾರಿಕೆಯ ಪಾಠವನ್ನು ತಿಳಿಸುವುದರ ಜೊತೆ ಕಾರ್ಯಾನುಭವ ದೊರಕಿತು. ಶಾಲೆಯ ಮುಖ್ಯ ಶಿಕ್ಷಕಿ, ಹಾಗೂ ಸಹಶಿಕ್ಷಕಿಯರು ಹಾಗೂ ಶಿಕ್ಷಕವೃಂದ ಜತೆಗೂಡಿದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ