ಪ್ರಮುಖ ಸುದ್ದಿಗಳು

ಸಿರಿಬಾಗಿಲು ಪ್ರತಿಷ್ಠಾನ – ರಾಮಧ್ಯಾನ, ಭಜನೆ, ಪ್ರವಚನ ಸಂಪನ್ನ

ಜಾಹೀರಾತು

ಸಾಂಸ್ಕೃತಿಕ ಸಾಹಿತ್ಯ ಕ್ಷೇತ್ರದಲ್ಲಿ ಪ್ರಧಾನ ಪಾತ್ರ ವಹಿಸುತ್ತಿರುವ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ  ನಡೆದ ರಾಮಧ್ಯಾನ- ಭಜನೆ- ಪ್ರವಚನ ಸಂಪನ್ನಗೊಂಡಿತು.ಊರ ಪರ ಊರ 12 ಭಜನಾ ತಂಡಗಳಿಂದ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ರಾಮಾಯಣ ಮಾಸಾಚರಣೆಯ ಪ್ರಯುಕ್ತ ವಿಶೇಷ ಭಜನೆ ನಡೆಯಿತು.

ಆ ಬಳಿಕ ಸಂಜೆಶ್ರೀ ದಾಮೋದರ ಶರ್ಮಾ ಬಾರ್ಕೂರು ಇವರಿಂದ ಭಗವಾನ್ ಶ್ರೀ ರಾಮನ ಆದರ್ಶಗಳ ಕುರಿತಾದ ಪ್ರವಚನ ನಡೆಯಿತು.ಶ್ರೀರಾಮಚಂದ್ರನ ಪಿತೃವಾಕ್ಯ ಪರಿಪಾಲನೆ, ಭರತನ ಭಾತೃಪ್ರೇಮ ,ಸೀತೆಯ ಪಾತಿವೃತ್ಯ ಲಕ್ಷ್ಮಣನ ಸಹೋದರ್ಯದ ಪ್ರೀತಿ ಇತ್ಯಾದಿ ವಿಚಾರಗಳು ಮನಮುಟ್ಟುವಂತೆ ಶರ್ಮಾರವರು ವಿವರಿಸಿದ್ದರು.

ಶ್ರೀ ರಾಮನ ಆದರ್ಶವನ್ನು ಜೀವನದಲ್ಲಿ ಪಾಲಿಸಿದಲ್ಲಿ ಪ್ರತೀ ಕುಟುಂಬಗಳು ಸುಖ ನೆಮ್ಮದಿಯಿಂದ ಬಾಳುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು..ಮುಖ್ಯ ಅತಿಥಿಯಾಗಿದ್ದ ಉದ್ಯಮಿ ಧಾರ್ಮಿಕ ಮುಂದಾಳು ವಸಂತ ಪೈ ಬದಿಯಡ್ಕ ಅವರು ಧಾರ್ಮಿಕತೆ ಸಾಂಸ್ಕೃತಿಕತೆ ಎಲ್ಲವೂ ಜೊತೆಗೂಡಿನಲ್ಲಿ ಒಂದು ಸಾನಿಧ್ಯ ವೃದ್ಧಿಸಬಹುದು. ಅದಕ್ಕೆ ಸಿರಿಬಾಗಿಲು ಪ್ರತಿಷ್ಠಾನವೇ ಆದರ್ಶ. ಪ್ರತಿಷ್ಠಾನದ ಚಟುವಟಿಕೆಗಳು ಗಡಿನಾಡು ಕಾಸರಗೋಡಿನಲ್ಲಿ ಎಲ್ಲರಿಗೂ ಒಂದು ಆದರ್ಶಪ್ರಾಯವಾಗಿದೆ. ಮುಂದೆ ಯಶಸ್ವಿಯಾಗಲಿ ಎಂದು ಹಾರೈಸಿದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts