ಪ್ರಮುಖ ಸುದ್ದಿಗಳು

ಸಿರಿಬಾಗಿಲು ಪ್ರತಿಷ್ಠಾನ – ರಾಮಧ್ಯಾನ, ಭಜನೆ, ಪ್ರವಚನ ಸಂಪನ್ನ

ಸಾಂಸ್ಕೃತಿಕ ಸಾಹಿತ್ಯ ಕ್ಷೇತ್ರದಲ್ಲಿ ಪ್ರಧಾನ ಪಾತ್ರ ವಹಿಸುತ್ತಿರುವ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ  ನಡೆದ ರಾಮಧ್ಯಾನ- ಭಜನೆ- ಪ್ರವಚನ ಸಂಪನ್ನಗೊಂಡಿತು.ಊರ ಪರ ಊರ 12 ಭಜನಾ ತಂಡಗಳಿಂದ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ರಾಮಾಯಣ ಮಾಸಾಚರಣೆಯ ಪ್ರಯುಕ್ತ ವಿಶೇಷ ಭಜನೆ ನಡೆಯಿತು.

ಆ ಬಳಿಕ ಸಂಜೆಶ್ರೀ ದಾಮೋದರ ಶರ್ಮಾ ಬಾರ್ಕೂರು ಇವರಿಂದ ಭಗವಾನ್ ಶ್ರೀ ರಾಮನ ಆದರ್ಶಗಳ ಕುರಿತಾದ ಪ್ರವಚನ ನಡೆಯಿತು.ಶ್ರೀರಾಮಚಂದ್ರನ ಪಿತೃವಾಕ್ಯ ಪರಿಪಾಲನೆ, ಭರತನ ಭಾತೃಪ್ರೇಮ ,ಸೀತೆಯ ಪಾತಿವೃತ್ಯ ಲಕ್ಷ್ಮಣನ ಸಹೋದರ್ಯದ ಪ್ರೀತಿ ಇತ್ಯಾದಿ ವಿಚಾರಗಳು ಮನಮುಟ್ಟುವಂತೆ ಶರ್ಮಾರವರು ವಿವರಿಸಿದ್ದರು.

ಶ್ರೀ ರಾಮನ ಆದರ್ಶವನ್ನು ಜೀವನದಲ್ಲಿ ಪಾಲಿಸಿದಲ್ಲಿ ಪ್ರತೀ ಕುಟುಂಬಗಳು ಸುಖ ನೆಮ್ಮದಿಯಿಂದ ಬಾಳುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು..ಮುಖ್ಯ ಅತಿಥಿಯಾಗಿದ್ದ ಉದ್ಯಮಿ ಧಾರ್ಮಿಕ ಮುಂದಾಳು ವಸಂತ ಪೈ ಬದಿಯಡ್ಕ ಅವರು ಧಾರ್ಮಿಕತೆ ಸಾಂಸ್ಕೃತಿಕತೆ ಎಲ್ಲವೂ ಜೊತೆಗೂಡಿನಲ್ಲಿ ಒಂದು ಸಾನಿಧ್ಯ ವೃದ್ಧಿಸಬಹುದು. ಅದಕ್ಕೆ ಸಿರಿಬಾಗಿಲು ಪ್ರತಿಷ್ಠಾನವೇ ಆದರ್ಶ. ಪ್ರತಿಷ್ಠಾನದ ಚಟುವಟಿಕೆಗಳು ಗಡಿನಾಡು ಕಾಸರಗೋಡಿನಲ್ಲಿ ಎಲ್ಲರಿಗೂ ಒಂದು ಆದರ್ಶಪ್ರಾಯವಾಗಿದೆ. ಮುಂದೆ ಯಶಸ್ವಿಯಾಗಲಿ ಎಂದು ಹಾರೈಸಿದರು

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ