ಮೂರು ಜಿಲ್ಲೆಗಳ ಮಡಿವಾಳ ಸಮಾಜ ಬಾಂಧವರಿಗೆ ‘ಕೆಸರ್ಡೊಂಜಿ ದಿನ’

ಬಂಟ್ವಾಳ: ಬಂಟ್ವಾಳ ತಾಲೂಕು ಮಡಿವಾಳ ಸಮಾಜ ಸೇವಾ ಸಂಘ (ರಿ), ಮಡಿವಾಳ ಯುವ ಬಳಗ ಬಂಟ್ವಾಳ ಮತ್ತು ಮಹಿಳಾ ಘಟಕ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ (ರಿ) ಮಂಗಳೂರು ಸಹಯೋಗದೊಂದಿಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲಾ ಮಡಿವಾಳ ಸಮಾಜ ಬಾಂಧವರಿಗೆ ಕೆಸರ್ ಡೊಂಜಿ ದಿನ 2024 ಕಾರ್ಯಕ್ರಮ ಭಾನುವಾರ ಬಂಟ್ವಾಳ ಸ್ಪರ್ಶ ಕಲಾ ಮಂದಿರ ಬಳಿ ಇರುವ ಕೆಸರುಗದ್ದೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಶ್ರೀ ಕ್ಷೇತ್ರ ಕರಿಂಜೆಯ ಶ್ರೀ ಮುಕ್ತಾನಂದ ಸ್ವಾಮೀಜಿ, ನಮ್ಮ ಹಿಂದಿನ ಸಂಸ್ಕಾರವನ್ನು ಉಳಿಸುವುದರೊಂದಿಗೆ ಸಶಕ್ತ,ಸದೃಢ,ತುಳು ಸಂಸ್ಕೃತಿ ಉಳಿಸುವ ಕಾರ್ಯ ಸಮಾಜದ ಯುವ ಪೀಳಿಗೆಯಿಂದಾಗಬೇಕು ಎಂದರು. ಬಳಿಕ ಕೆಸರು ಗದ್ದೆಯಲ್ಲಿ ಕಂಬಳದ ಕೋಣವನ್ನು ಇಳಿಸುವ ಮೂಲಕ ವಿವಿಧ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

ಸಭಾಧ್ಯಕ್ಷತೆಯನ್ನು ದ. ಕ. ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಬಿ. ಎನ್. ಪ್ರಕಾಶ್ ವಹಿಸಿದ್ದರು. ಸಂಘದ ತಾಲೂಕು ಗೌರವಾಧ್ಯಕ್ಷ ಹಾಗೂ ನಿಕಟಪೂರ್ವ ಅಧ್ಯಕ್ಷ ಎನ್.ಕೆ.ಶಿವ ನಂದಾವರ, ಉದ್ಯಮಿಗಳಾದ ಉದಯ ಸಾಲಿಯಾನ್ ಅಜ್ಜಾಡಿ ನಲ್ಲೂರು, ಧರ್ಮೇಂದ್ರ ಗಣೇಶಪುರ, ಸುಧಾಕರ ಪುತ್ರನ್, ಪ್ರವೀಣ್ ಎನ್. ಬಂಗೇರ, ಡಾ. ಸರಳಾ ರಮೇಶ್, ಲಗೂನ್ ಕ್ಲೋತಿಂಗ್ ಪ್ರೈ ಲಿ. ಹಿರಿಯ ಪ್ರಬಂಧಕ ರಮೇಶ್ ಬಂಗೇರ, ಸಕಲೇಶಪುರದ ಪಿಡಬ್ಲ್ಯುಡಿ ಗುತ್ತಿಗೆದಾರ ಕೆ.ವಿಶ್ವನಾಥ ಹಾಗೂ ಪುತ್ತೂರು ನಗರಸಭೆ ಸದಸ್ಯ ಪ್ರೇಮ್ ಕುಮಾರ್ ಭಾಗವಹಿಸಿದ್ದರು. ಈ ಸಂದರ್ಭ ಭಾರತೀಯ ಭೂಸೇನೆಯ ಸುಬೇದಾರ್ ಜಯೂನಿಯರ್ ಕಮೀಷನರ್ ಆಫೀಸರ್ ಆಗಿರುವ ಉಮೇಶ್ ಸಾಲಿಯಾನ್ ಹಿರಿಯಡ್ಕ, ಕಾಂತಾರ ಖ್ಯಾತಿಯ ಚಿತ್ರನಟ ಶನಿಲ್ ಗುರು, ಅಂತಾರಾಷ್ಟ್ರೀಯ ಮಟ್ಟದ ಬಾಸ್ಕೆಟ್ ಬಾಲ್ ಆಟಗಾರ ಸಂಕೇತ್ ಸುರೇಶ್ ಹೊಸಬೆಟ್ಟು ಅವರನ್ನು ಸನ್ಮಾನಿಸಲಾಯಿತು. ಗೌರವ ಸಲಹೆಗಾರ ಪುಷ್ಪರಾಜ್ ಕುಕ್ಕಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯೋಗೀಶ್ ಕಲಸಡ್ಕ ಸ್ವಾಗತಿಸಿದರು. ಸಂಘದ ಅಧ್ಯಕ್ಷ ಹರೀಶ್ ಮಂಕುಡೆ ವಂದಿಸಿದರು. ವೆಂಕಟೇಶ ಮಾಸ್ಟರ್ ಕಾರ್ಯಕ್ರಮ ನಿರ್ವಹಿಸಿದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮೂರು ಜಿಲ್ಲೆಗಳ ಮಡಿವಾಳ ಸಮಾಜ ಬಾಂಧವರಿಗೆ ‘ಕೆಸರ್ಡೊಂಜಿ ದಿನ’"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*