ಬಂಟ್ವಾಳ

ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆ ವಿರೋಧಿಸಿ ಬಿ.ಸಿ.ರೋಡ್ ನಲ್ಲಿ ಮಾನವ ಸರಪಳಿ

.

 

ಮಾನವ ಸರಪಳಿ

ಮಾನವ ಸರಪಳಿ

ಡಾ. ಕಲ್ಲಡ್ಕ ಪ್ರಭಾಕರ ಭಟ್

..

ಬಂಟ್ವಾಳ: ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಘಟನೆಗಳು ಹಿಂದು ಸಮಾಜವನ್ನೇ ನಾಶ ಮಾಡುವ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಹಿಂದು ಸಮಾಜ ಎದ್ದು ನಿಂತಿದೆ ಎಂದು ಹಿರಿಯ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಬಾಂಗ್ಲಾ ದೇಶದಲ್ಲಿ ಹಿಂದುಗಳ ನರಮೇಧ ಖಂಡಿಸಿ, ಹಿಂದು ಹಿತರಕ್ಷಣಾ ಸಮಿತಿ ವತಿಯಿಂದ ವಿಶ್ವ ಹಿಂದು ಪರಿಷದ್ ಸಹಿತ ಪರಿವಾರ ಸಂಘಟನೆಗಳಿಂದ ಬಿ.ಸಿ.ರೋಡಿನಲ್ಲಿ ಮಾನವ ಸರಪಳಿ ರಚನೆ ನಡೆಯಿತು. ಬಳಿಕ ಮಾತನಾಡಿದ ಡಾ.ಪ್ರಭಾಕರ ಭಟ್, ಹಿಂದುಗಳ ಮೇಲೆ ಆಕ್ರಮಣ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಬಾಂಗ್ಲಾದಲ್ಲಿ ನಡೆಯುತ್ತಿರುವ ಘಟನೆಯ ಹಿನ್ನೆಲೆಯನ್ನು ನೋಡಿದಾಗ, ಇದು ಇಡೀ ಹಿಂದು ಸಮಾಜವನ್ನು ನಾಶ ಮಾಡುವ ಹುನ್ನಾರವಾಗಿದೆ. ಭಾರತದ ಪ್ರತಿಪಕ್ಷ ಈ ವಿಚಾರದಲ್ಲಿ ಮೌನವಾಗಿರುವುದು ಯಾಕೆ ಎಂದು ಅವರು ಪ್ರಶ್ನಿಸಿದರು. ವಿಹಿಂಪ ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ ಮಾತನಾಡಿ, ಭಾರತದ ಹಿಂದುಗಳು ಬಾಂಗ್ಲಾದೇಶದಲ್ಲಿ ನಡೆದ ಹಿಂದುಗಳ ನರಮೇಧವನ್ನು ಖಂಡಿಸುವ ಸಲುವಾಗಿ ಇಲ್ಲಿ ಸೇರಿದ್ದೇವೆ ಎಂದರು. ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ವಿಹಿಂಪ ತಾಲೂಕು ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಸಹಿತ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ