ಬಂಟ್ವಾಳ

ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆ ವಿರೋಧಿಸಿ ಬಿ.ಸಿ.ರೋಡ್ ನಲ್ಲಿ ಮಾನವ ಸರಪಳಿ

.

ಜಾಹೀರಾತು

 

ಮಾನವ ಸರಪಳಿ

ಮಾನವ ಸರಪಳಿ

ಡಾ. ಕಲ್ಲಡ್ಕ ಪ್ರಭಾಕರ ಭಟ್

..

ಬಂಟ್ವಾಳ: ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ನಡೆದ ಘಟನೆಗಳು ಹಿಂದು ಸಮಾಜವನ್ನೇ ನಾಶ ಮಾಡುವ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಹಿಂದು ಸಮಾಜ ಎದ್ದು ನಿಂತಿದೆ ಎಂದು ಹಿರಿಯ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಬಾಂಗ್ಲಾ ದೇಶದಲ್ಲಿ ಹಿಂದುಗಳ ನರಮೇಧ ಖಂಡಿಸಿ, ಹಿಂದು ಹಿತರಕ್ಷಣಾ ಸಮಿತಿ ವತಿಯಿಂದ ವಿಶ್ವ ಹಿಂದು ಪರಿಷದ್ ಸಹಿತ ಪರಿವಾರ ಸಂಘಟನೆಗಳಿಂದ ಬಿ.ಸಿ.ರೋಡಿನಲ್ಲಿ ಮಾನವ ಸರಪಳಿ ರಚನೆ ನಡೆಯಿತು. ಬಳಿಕ ಮಾತನಾಡಿದ ಡಾ.ಪ್ರಭಾಕರ ಭಟ್, ಹಿಂದುಗಳ ಮೇಲೆ ಆಕ್ರಮಣ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಬಾಂಗ್ಲಾದಲ್ಲಿ ನಡೆಯುತ್ತಿರುವ ಘಟನೆಯ ಹಿನ್ನೆಲೆಯನ್ನು ನೋಡಿದಾಗ, ಇದು ಇಡೀ ಹಿಂದು ಸಮಾಜವನ್ನು ನಾಶ ಮಾಡುವ ಹುನ್ನಾರವಾಗಿದೆ. ಭಾರತದ ಪ್ರತಿಪಕ್ಷ ಈ ವಿಚಾರದಲ್ಲಿ ಮೌನವಾಗಿರುವುದು ಯಾಕೆ ಎಂದು ಅವರು ಪ್ರಶ್ನಿಸಿದರು. ವಿಹಿಂಪ ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ ಮಾತನಾಡಿ, ಭಾರತದ ಹಿಂದುಗಳು ಬಾಂಗ್ಲಾದೇಶದಲ್ಲಿ ನಡೆದ ಹಿಂದುಗಳ ನರಮೇಧವನ್ನು ಖಂಡಿಸುವ ಸಲುವಾಗಿ ಇಲ್ಲಿ ಸೇರಿದ್ದೇವೆ ಎಂದರು. ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ವಿಹಿಂಪ ತಾಲೂಕು ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಸಹಿತ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.