ಬಂಟ್ವಾಳ

ರಾಜ್ಯಪಾಲರ ಕ್ರಮ ವಿರೋಧಿಸಿ ಬಂಟ್ವಾಳದಲ್ಲಿ ಕಾಂಗ್ರೆಸ್ ನಿಂದ ಹೆದ್ದಾರಿ ತಡೆ, ಪ್ರತಿಭಟನೆ

ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ

ಹೆದ್ದಾರಿ ತಡೆದ ಕಾಂಗ್ರೆಸ್ ಕಾರ್ಯಕರ್ತರು ಟಯರ್ ಗೆ ಕಿಚ್ಚಿಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ವತಿಯಿಂದ ಮೆರವಣಿಗೆ ಮತ್ತು ಪ್ರತಿಭಟನೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭ ಬಿ.ಸಿ.ರೋಡಿನ ಪೊಳಲಿ ದ್ವಾರದಿಂದ ತಾಲೂಕು ಆಡಳಿತ ಸೌಧದವರೆಗೆ ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸಾಗಿದ ಪ್ರತಿಭಟನಾಕಾರರು ಹೆದ್ದಾರಿ ತಡೆ ನಡೆಸಿ, ಟೈಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ರಮಾನಾಥ ರೈ, ರಾಜ್ಯಪಾಲರ ಮೂಲಕ ಸರಕಾರವನ್ನು ಅಸ್ಥಿರ ಮಾಡುವ ಕಾರ್ಯ ಮಾಡಲಾಗುತ್ತಿದೆ. ಕೋರ್ಟ್ ನಲ್ಲಿ ಸಾಬೀತು ಮಾಡಲಾಗದ ಹುರುಳಿಲ್ಲದ ಪ್ರಕರಣವಿದು ಎಂದರು.

ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದ ಆರ್.ಪದ್ಮರಾಜ್ ಮಾತನಾಡಿ, ಬಿಜೆಪಿಯದ್ದು ಒಂದು ಮನೆ ಹದಿನೈದು ಬಾಗಿಲಾಗಿದೆ. ಬೆಳೆಯುತ್ತಿರುವ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಸರಕಾರ ಉರುಳಿಸುವ ಕುತಂತ್ರ ಮಾಡಲಾಗಿದೆ. ರಾಜ್ಯಪಾಲರು ತಮ್ಮ ಹುದ್ದೆಯ ಘನತೆ ಕಾಪಾಡಬೇಕು ಎಂದರು.

ನಾಯಕರಾದ ಜಿ.ಎ.ಬಾವಾ ಮಾತನಾಡಿ, ಸಿದ್ಧರಾಮಯ್ಯ ವಿರುದ್ಧ ಆರೋಪವೇ ಹುರುಳಿಲ್ಲದ್ದು ಎಂದರು. ಬುಡಾ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಬಾಲಕೃಷ್ಣ ಅಂಚನ್, ಪಾಣೆಮಂಗಳೂರು ಬ್ಲಾಕ್ ನಿಯೋಜಿತ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಪ್ರಮುಖರಾದ ಅಶ್ವನಿ ಕುಮಾರ್ ರೈ, ಪಿಯೂಸ್ ಎಲ್.ರೋಡ್ರಿಗಸ್, ಕೆ. ಸಂಜೀವ ಪೂಜಾರಿ, ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಜಯಂತಿ ಪೂಜಾರಿ, ವಿಲ್ಮಾ ಮೊರಾಸ್, ಪದ್ಮನಾಭ ರೈ, ಅಬ್ಬಾಸ್ ಆಲಿ, ಚಿತ್ತರಂಜನ್ ಶೆಟ್ಟಿ ಬೊಂಡಾಲ ಮತ್ತಿತರ ನಾಯಕರು, ಪಕ್ಷದ ವಿವಿಧ ಜವಾಬ್ದಾರಿಯುಳ್ಳ ಮುಖಂಡರು, ಪುರಸಭಾ ಸದಸ್ಯರು, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ