ಬಂಟ್ವಾಳ

ಸಜೀಪಮುನ್ನೂರು ಶ್ರೀ ಶಾರದಾ ಯುವಕ ಮಂಡಲ ಶ್ರೀಕೃಷ್ಣಜನ್ಮಾಷ್ಟಮಿ ಸುವರ್ಣಮಹೋತ್ಸವ ನಿಮಿತ್ತ ಹಲವು ಕಾರ್ಯಕ್ರಮ

..

ಸಜಿಪಮುನ್ನೂರು ಗ್ರಾಮದ ಶಾರದಾನಗರದ ಶ್ರೀ ಶಾರದಾ ಯುವಕ ಮಂಡಲ ವತಿಯಿಂದ ಶ್ರೀಕೃಷ್ಣಜನ್ಮಾಷ್ಟಮಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, 26 ರಿಂದ 28 ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ಯುವಕ ಮಂಡಲದ ಆಧ್ಯಕ್ಷ ಪರಮೇಶ್ವರ ಶಾರದಾ ನಗರ ಅವರು ತಿಳಿಸಿದ್ದಾರೆ.

ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 1975 ರಿಂದ ಸದಾನಂದ ಪೂಜಾರಿ ಹಾಗೂ ಗೆಳೆಯರೊಂದಿಗೆ ಸೇರಿಕೊಂಡು ಶಾರದಾ ನಗರದಲ್ಲಿ ಶ್ರೀಕೃಷ್ಣಾಷ್ಟಮಿ ಮೊಸರು ಕುಡಿಕೆಯನ್ನು ಶ್ರೀ ಶಾರದಾ ಕ್ರೀಡಾ ಕೂಟ ಸಂಘದ ವತಿಯಿಂದ ಆಯೋಜನೆ ಮಾಡಿಕೊಂಡು ಬರುತ್ತಿದ್ದರು. ಕೆಲವು ವರ್ಷಗಳ ನಂತರ ಶ್ರೀ ಶಾರದಾ ಯುವಕ ಮಂಡಲ(ರಿ) ಶಾರದಾನಗರ ಎಂದು ಮರುನಾಮಕರಣವಾಗಿ ಶ್ರೀ ಶಾರದಾ ಕ್ರೀಡಾಂಗಣದಲ್ಲಿ ಇಲ್ಲಿಯವರೆಗೆ ಶ್ರೀ ಕೃಷ್ಣಾ ಜನ್ಮಾಷ್ಟಮಿಯ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರುತ್ತಿದ್ದೇವೆ ಎಂದರು

.26 ನೇ ಸೋಮವಾರ ಬೆಳಿಗ್ಗೆ ಗಣಹೋಮ ಶ್ರೀ ಶಾರದಾಬಿಕಾ ಮಂದಿರದಿಂದ ಶ್ರೀ ಶಾರದಾ ಕ್ರೀಡಾಂಗಣಕ್ಕೆ ಪುಟಾಣಿ ಮಕ್ಕಳ ಶ್ರೀಕೃಷ್ಣ ವೇಷ, ಚೆಂಡೆ, ಗೊಂಬೆ ಕುಣಿತ, ಕಳಸಗಳನ್ನು ಹಿಡಿದುಕೊಂಡು ಮೆರವಣಿಗೆಯಲ್ಲಿ ಸಾಗಿಬರಲಿದೆ. ಬಳಿಕ ಕ್ರೀಡಾಕೂಟ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ,ಹಾಗೂ ಪ್ರತಿ ದಿನ ಸಮಾರೋಪ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.
. 27 ಮಂಗಳವಾರ ಬೆಳಿಗ್ಗೆ 9 ಗಂಟೆಗೆಕೆಸರ್ ಗೊಬ್ಬು, ಕೆಸರು ಗದ್ದೆಯಲ್ಲಿ ಮುಕ್ತ ವಾಲಿಬಾಲ್ ಹಗ್ಗ ಜಗ್ಗಾಟ, ತ್ರೋಬಾಲ್, ಹಾಗೂ ಇನ್ನಿತರ ಪಂದ್ಯಾಕೂಟ ನಡೆಯಲಿರುವುದು. ಸಂಜೆ ಸ್ಥಳಿಯ ಮಕ್ಕಳಿಂದ ಸಾಂಸ್ಕೃತಿಕ ಸಮಾರಂಭ ಹಾಗೂ ನಮ್ಮ ಕಲಾವಿದೆರ್ ಬೆದ್ರ ತಂಡದ ಉಮೇಶ್ ಮಿಜಾರು ಬಳಗದಿಂದತೆಲಿಕೆದ ಗೊಂಚಿಲ್ಹಾಸ್ಯಕಾರ್ಯಕ್ರಮ ನಡೆಯಲಿದೆ.
.28 ಬುಧವಾರ ಸಂಜೆ ಗಂಟೆ 6ಕ್ಕೆ ಸಮಾರೋಪ ಸಮಾರಂಭದಲ್ಲಿ ರಾಜಕೀಯ ಮುಖಂಡರು, ಸಾಮಾಜಿಕ ಮುಖಂಡರು ಹಾಗೂ ಗಣ್ಯವ್ಯಕ್ತಿಗಳ ಉಪಸ್ಥಿತಿಯಲ್ಲಿ ನಡೆಯಲಿದ್ದು, ರಾಷ್ಟ್ರಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆದ ಮಹಾನಿಯರಿಗೆ ಗೌರವ ಅರ್ಪಣೆ. 2023, 2024 ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ, ಬಹುಮಾನ ವಿತರಣೆ ಹಾಗೂ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ 50ನೇ ವರ್ಷದ ಸುವರ್ಣ ಮಹೋತ್ಸವದ ಲಕ್ಕಿಡಿಪ್ ಡ್ರಾ ಕಾರ್ಯಕ್ರಮ ವೇದಿಕೆಯಲ್ಲಿ ಮಾಡಲಾಗುವುದು. ರಾತ್ರಿ ಗಂಟೆ 9ಕ್ಕೆ ಚಾಪರ್ಕ ಕಲಾವಿದರಿಂದ ವಿಭಿನ್ನ ಶೈಲಿಯ ನಾಟಕ ರಾಜ್ಯ ಪ್ರಶಸ್ತಿ ವಿಜೇತ ಡಾ| ದೇವದಾಸ ಕಾಪಿಕಾಡು ರಚಿಸಿ ನಿರ್ದೇಶಿಸಿರುವಪನಿಯರೆ ಅವಂದಿನನಾಟಕ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗೌರವ ಅಧ್ಯಕ್ಷರಾದ ತಿಮ್ಮಪ್ಪ ಬೆಳ್ಳಾಡ, ಲೆಕ್ಕ ಪರಿಶೋಧಕರಾದ ವಿಜೇಶ್ ಕುಮಾರ್, ಕುಡಾರ್ಲಚ್ಚಿಲ್, ಪ್ರಸಾದ್ ಪೂಜಾರಿ ಕುಡಾರ್ಲಚ್ಚಿಲ್, ಸದಸ್ಯರಾದ ಶಿವಾನಂದ ಕುಡಾರ್ಲಚ್ಚಿಲ್ ಉಪಸ್ಥಿತರಿದ್ದರು

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ